ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಶಾಲೆಗಳಲ್ಲಿ ಕರಾಟೆ ತರಬೇತಿ ಪ್ರಾರಂಭಿಸಲು ಶಿಕ್ಷಣ ಸಚಿವರಿಗೆ ಮನವಿ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜನವರಿ 22: ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರಾಟೆ ತರಬೇತಿ ಆರಂಭಿಸಬೇಕೆಂದು ಹಿರಿಯ ಕರಾಟೆ ತರಬೇತುದಾರರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್​ ಕುಮಾರ್​ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಇಂದು ಶಿಕ್ಷಣ ಸಚಿವ ಎಸ್.ಸುರೇಶ್​ ಕುಮಾರ್​​​​ ಅವರನ್ನು ಭೇಟಿಯಾದ ಕರಾಟೆ ಹಿರಿಯ‌ ತರಬೇತುದಾರರ ನಿಯೋಗ, ಪ್ರೌಢ ಶಾಲೆಗಳ ವಿದ್ಯಾರ್ಥಿನಿಯರಲ್ಲಿ ಆತ್ಮರಕ್ಷಣೆ ಹೆಚ್ಚಿಸುವ ಸಲುವಾಗಿ‌ ಈ ಕರಾಟೆ ತರಬೇತಿ ಮುಖ್ಯವಾಗಿದೆ ಎಂದರು.

ಲಗ್ನ ಪತ್ರಿಕೆಯಲ್ಲಿ ಕೇಂದ್ರದ ಯೋಜನೆ; ಫೋಟೋ ವೈರಲ್ಲಗ್ನ ಪತ್ರಿಕೆಯಲ್ಲಿ ಕೇಂದ್ರದ ಯೋಜನೆ; ಫೋಟೋ ವೈರಲ್

ಆದ್ದರಿಂದ ಕರಾಟೆ ತರಬೇತಿ ಪುನರಾರಂಭಿಸಬೇಕೆಂದು ಸಚಿವರಲ್ಲಿ ಕೋರಿದ್ದಾರೆ. ಹಿರಿಯ ತರಬೇತುದಾರರ ಮನವಿಯನ್ನು ಆಲಿಸಿದ ಸಚಿವ ಸುರೇಶ್​​ ಕುಮಾರ್​​​, ಕರಾಟೆ ತರಬೇತಿ ‌ಪುನರಾರಂಭಿಸಲು ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Appeals To Education Minister To Start Karate Training In Government Schools

ಒನ್ ಇಂಡಿಯಾ ವರದಿಗೆ ಸ್ಪಂದಿಸಿದ ಶಿಕ್ಷಣ ಸಚಿವರು, ಶಾಲೆಗೆ ಅಧಿಕಾರಿಗಳ ಭೇಟಿಒನ್ ಇಂಡಿಯಾ ವರದಿಗೆ ಸ್ಪಂದಿಸಿದ ಶಿಕ್ಷಣ ಸಚಿವರು, ಶಾಲೆಗೆ ಅಧಿಕಾರಿಗಳ ಭೇಟಿ

ಬಳ್ಳಾರಿಯ ಹಿರಿಯ ತರಬೇತುದಾರರಾದ ಕಟ್ಟೇಸ್ವಾಮಿ, ಸುಭಾಷ್ ಚಂದ್ರ, ಕೊಪ್ಪಳದ ಹಿರಿಯ ತರಬೇತುದಾರ ಮೌನೇಶ ವಡ್ಡಟಿ, ವಿಜಯಪುರದ ಹಿರಿಯ ತರಬೇತುದಾರ ಶಿವಕುಮಾರ ಶಾರದಳ್ಳಿ ಸೇರಿದಂತೆ ಅನೇಕರು ಸಚಿವರಿಗೆ ಈ ಮನವಿ ಮಾಡಿದ್ದಾರೆ.

English summary
Senior karate instructors have requested to Education Minister S. Suresh Kumar to start karate training in all government high schools in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X