ಬಳ್ಳಾರಿ: ಕೊರೊನಾದಿಂದ ಕೆಲಸ ಸಿಗದ ಕೂಲಿ ಕಾರ್ಮಿಕರಿಂದ ಕಳ್ಳತನ
ಬಳ್ಳಾರಿ, ನವೆಂಬರ್ 6: ಕೊರೊನಾ ಮಾಹಾಮಾರಿ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡ ಕೂಲಿ ಕಾರ್ಮಿಕರು ದಾರಿ ಕಾಣದೇ ಕಳ್ಳತನ ಮಾಡಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿಯ ಸಿರುಗುಪ್ಪ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ 7 ಜನ ಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ. ಸಿರುಗುಪ್ಪ ನಗರ ಸೇರಿ ವಿವಿದೆಡೆ ಬೈಕ್, ಮೊಬೈಲ್ ಫೋನ್, ಒಡವೆಗಳನ್ನು ಕಳ್ಳತನ ಮಾಡುತ್ತಿದ್ದರು, ಆರೋಪಿಗಳಿಂದ 7.05 ಲಕ್ಷ ರೂ. ಮೌಲ್ಯದ 16 ಮೋಟಾರ್ ಸೈಕಲ್, 5.56 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಒಂಬತ್ತು ಮೊಬೈಲ್ ಫೋನ್ಗಳು ವಶಪಡಿಸಿಕೊಂಡಿದ್ದಾರೆ.
ಸಿರುಗುಪ್ಪ ನಗರದ ಬಿ.ರಾಘವೇಂದ್ರ ನೀಡಿದ ದೂರಿನನ್ವಯ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಗುರುವಾರ (ನ.5) ರಾತ್ರಿ ವೇಳೆಯಲ್ಲಿ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಈ ಕಳ್ಳರು ಕೇವಲ ಸಿರುಗುಪ್ಪವಲ್ಲದೇ ದಾವಣಗೆರೆ, ರಾಯಚೂರು ಕಡೆಯೂ ಕಳ್ಳತನ ಮಾಡುತ್ತಿದ್ದರು.

ಸದ್ಯ ಸಿರುಗುಪ್ಪ ನಗರದ ಉಲ್ಲೇಶ್(22) ನಾಗರಾಜ್ (21) ಇಸ್ಮಾಯಿಲ್ (27) ಸೇರಿದಂತೆ ಒಟ್ಟು ಏಳು ಜನರ ಬಂಧನ ಮಾಡಿದ್ದಾರೆ . ಕಳೆದ ಮೂರು ತಿಂಗಳಿಂದ ಕೆಲಸ ಕಳೆದುಕೊಂಡಿದ್ದ ಏಳು ಜನ ಆರೋಪಿಗಳು, ಕೆಲಸ ಕಳೆದುಕೊಂಡ ಹಿನ್ನೆಲೆಯಲ್ಲಿ, ಕಳ್ಳತನ ಮಾಡಲು ಮುಂದಾಗಿದ್ದರು.

ರೈಸ್ ಮಿಲ್, ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು ನಾಲ್ಕು ತಿಂಗಳಿಂದ ಕೆಲಸ ಸಿಗದ ಕಾರಣ ಕಳ್ಳತನ ಮಾಡಿ ಜೀವನ ನಡೆಸುತ್ತಿದ್ದರು. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications