ಸಾರ್ವಜನಿಕರ ಮೇಲೆ ಹಲ್ಲೆ: ಬಳ್ಳಾರಿ ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರುದ್ಧ ಜನಾಕ್ರೋಶ!
ಬಳ್ಳಾರಿ ನವೆಂಬರ್ 21: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುತ್ತಾರೆ. ಆದರೇ ಈ ಮಾತು ಕೇವಲ ಪುಸ್ತಕಗಳಿಗೆ ಮಾತ್ರ ಸೀಮಿತವಾದಂತಿದೆ. ಬಳ್ಳಾರಿ ತಾಲೂಕಿನ ಕುಡತಿನಿ ಪಟ್ಟಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬ ಸಾರ್ವಜನಿಕನ ಮೇಲೆ ಹಲ್ಲೆ ನಡೆಸಿ ಈಗಲೂ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹೊಂದಿರುವವರ ದರ್ಪವೇ ಮುಂದುವರೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ.
ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತೀರ್ಥಪ್ರಸಾದ ಅವರು ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಿ ದರ್ಪ ತೋರಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಮುಖ್ಯಾಧಿಕಾರಿ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡತಿನಿ ಪಟ್ಟಣದ 19ನೇ ವಾರ್ಡಿಗೆ ಇಂದು ಬೆಳಗ್ಗೆ ಪಂಚಾಯಿತಿ ಮುಖ್ಯಾಧಿಕಾರಿ ತೀರ್ಥ ಪ್ರಸಾದ್ರವರು ಭೇಟಿ ನೀಡಿದ್ದಾಗ ಅಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಮುಖ್ಯಾಧಿಕಾರಿಗಳಿಗೆ ಸ್ಥಳೀಯ ನಿವಾಸಿ ಸಿ.ಮಂಜುನಾಥರವರು ಗಮನಕ್ಕೆ ತಂದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಾಧಿಕಾರಿ ಮತ್ತು ಮಂಜುನಾಥರವರ ನಡುವೆ ಮಾತಿಗೆ ಮಾತು ಬೆಳೆದಾಗ ಆವೇಶಕ್ಕೆ ಒಳಗಾದ ಮುಖ್ಯಾಧಿಕಾರಿ ತೀರ್ಥ ಪ್ರಸಾದ್ ಮಂಜುನಾಥ ರವರ ಮೇಲೆ ಹಲ್ಲೆ ನಡೆಸಿದ್ದಾರೆ.
ಕಳೆದ ತಿಂಗಳು ಸಹ ಇದೇ ರೀತಿ ಮುಖ್ಯಾಧಿಕಾರಿ ತೀರ್ಥ ಪ್ರಸಾದ್ರವರು ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ್ದ ಘಟನೆಯನ್ನು ಜನರು ಮರೆಯುವ ಮುನ್ನವೇ ಮತ್ತೊಂದು ಅಂತಹದೇ ಹಲ್ಲೆ ಘಟನೆ ನಡೆದಿದೆ.
ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಬೇಕಾದ ಅಧಿಕಾರಿಗಳೇ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುವುದು ವ್ಯವಸ್ಥೆಯಲ್ಲಿ ಅಧಿಕಾರಿಗಳ ದರ್ಪದ ಆರ್ಭಟ ಮೀತಿ ಮೀರಿರುವುದಕ್ಕೆ ಸಾಕ್ಷಿಯಾಗಿದೆ. ಸಾರ್ವಜನಿಕರು ಈ ಘಟನೆಯನ್ನು ಖಂಡಿಸಿ, ಕೂಡಲೇ ಮುಖ್ಯಾಧಿಕಾರಿ ತೀರ್ಥ ಪ್ರಸಾದ್ ರವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications