ಬಳ್ಳಾರಿಯಲ್ಲಿನ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ: ಶ್ರೀ ರಾಮುಲು ಸ್ಪಷ್ಟನೆ
ಬಳ್ಳಾರಿ, ಜನವರಿ, 17: ಬಳ್ಳಾರಿಯಲ್ಲಿ ಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಐಟಿ ನಡೆದಿತ್ತು. ಈ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಆರೋಪ ತಳ್ಳಿಹಾಕಿದ ರಾಮುಲು
ಬಳ್ಳಾರಿಯಲ್ಲಿನ ಉದ್ಯಮಿ ಕೈಲಾಶ್ ವ್ಯಾಸ್ಗೆ ಶ್ರೀರಾಮುಲು ಮತ್ತು ಕಂಪ್ಲಿ ಮಾಜಿ ಶಾಸಕ ಸುರೇಶ್ ಬಾಬು ಆಪ್ತರಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಇದಕ್ಕೆ ಶ್ರೀರಾಮುಲು ನನಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ. ಜನವರಿ 13 ರಂದು ಐಟಿ ಅಧಿಕಾರಿಗಳು ಕೈಲಾಶ್ ವ್ಯಾಸ ಅವರ ಕಚೇರಿ ಮತ್ತು ಉದ್ಯಮಗಳ ಮೇಲೆ ದಾಳಿ ನಡೆಸಿದ್ದರು. ಕೈಲಾಶ್ ವ್ಯಾಸ್ ಮನೆ ಮತ್ತು ಕಚೇರಿಗಳಲ್ಲಿನ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಅಧಿಕಾರಿಗಳು ಈತನಿಗೆ ಕೆಲವು ರಾಜಕಾರಣಿಗಳ ನಂಟು ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಶ್ರೀರಾಮುಲು, ಸುರೇಶ್ ಬಾಬು ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಈತನ ಕಂಪನಿಯಲ್ಲಿ ಷೇರು ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.
ಐಟಿ ದಾಳಿಗೂ ನನಗೂ ಸಂಬಂಧವಿಲ್ಲ
ಈ ಬೆಳವಣಿಗೆಗಳ ಬೆನ್ನಲ್ಲೇ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಹೆಂಡತಿಯ ಕಂಪನಿಯಲ್ಲಿ ಷೇರು ಹೊಂದಿದ್ದೇನೆ, ಅದು ಕಾನೂನುಬದ್ಧವಾಗಿದೆ. ಸಮಯಕ್ಕೆ ಸರಿಯಾಗಿ ಐಟಿ ರಿಟರ್ನ್ಗಳನ್ನು ಸಲ್ಲಿಸುತ್ತೇನೆ. ಮತ್ತು ಬಳ್ಳಾರಿಯಲ್ಲಿನ ಎಲ್ಲಾ ಐಟಿ ದಾಳಿಗಳನ್ನು ನನಗೆ ಲಿಂಕ್ ಮಾಡಬಾರದು ಎಂದು ತಿಳಿಸಿದ್ದರು.

ಕಾಂಗ್ರೆಸ್ ಮುಖಂಡನಿಗೂ ಐಟಿ ಶಾಕ್
ಹಾಗೆಯೇ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ತಿಂಗಳ ಅವಧಿಯಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿಯಾಗಿದೆ. ಕಳೆದ ನವೆಂಬರ್ 17ರಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೂ ಐಟಿ ದಾಳಿಯಾಗಿತ್ತು. ಮದುವೆಗೆ ಹೋಗುವ ಸೋಗಿನಲ್ಲಿ 10ಕ್ಕೂ ಹೆಚ್ಚು ಕಾರಿನಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಬಂದು ದಾಳಿ ಮಾಡಿದ್ದರು. ಸೋಮವಾರ (ಜನವರಿ 16) ಮತ್ತೆ ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.

8ಕ್ಕೂ ಹೆಚ್ಚು ಕಾರಿನಲ್ಲಿ ಬಂದಿರುವ ಅಧಿಕಾರಿಗಳು ಏಕಕಾಲದಲ್ಲಿ ಅಕ್ಮಲ್ ಮನೆ, ಕಚೇರಿ, ಸೋದರನ ಮನೆ ಹಾಗೂ ಕಾಫಿ ಕ್ಯೂರಿಂಗ್ ಮೇಲೂ ದಾಳಿ ಮಾಡಿದ್ದರು. ಪ್ರಸ್ತುತ ಅಕ್ಮಲ್ ಬೆಂಗಳೂರಿನಲ್ಲಿ ಇದ್ದು, ಅವರ ಅನುಪಸ್ಥಿತಿಯಲ್ಲಿ ಮನೆ-ಕಚೇರಿಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು. ಆದರೆ, ಎರಡು ತಿಂಗಳ ಅವಧಿಯಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಐಟಿ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕುತ್ತಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications