Ballari Airport: ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದ್ರೆ ಗಾಲಿ ಜನಾರ್ದನ ರೆಡ್ಡಿ ಮೊದಲ ಆಸೆ ಏನು ಗೊತ್ತಾ?
ಬೆಳಗಾವಿ, ಡಿಸೆಂಬರ್, 13: ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳಿವೆ. ಹಾಗೆಯೇ ಬಳ್ಳಾರಿಯಲ್ಲಿ ಏನಾದ್ರೂ ವಿಮಾನ ನಿಲ್ದಾಣ ಆದ್ರೆ ಅದಕ್ಕೆ ಶ್ರೀ ಹನುಮಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಂತಾ ನಾಮಕಾರಣ ಮಾಡಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬೆಳಗಾವಿ ಅಧಿವೇಶನದ ವೇಳೆ ಹೇಳಿದರು.
ಅಯೋಧ್ಯೆಯಲ್ಲಿ ಶ್ರೀರಾಮ ಇಂಟರ್ ನ್ಯಾಷನಲ್ ಏರ್ಪೋರ್ಟ್ ಇದೆ. ಇನ್ನು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಆದ್ರೆ ಅದಕ್ಕೆ ಶ್ರೀ ಹನುಮಾನ್ ಇಂಟರ್ ನ್ಯಾಷನಲ್ ಏರ್ಪೋರ್ಟ್ ಎಂದು ನಾಮಕರಣ ಮಾಡಲಿ ಅಂತಾ ನನ್ನ ಆಸೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿ ಏರ್ ಬಸ್ಗಳು ಇವತ್ತು ಬರುತ್ತಿವೆ ಅಂದರೆ ನಾನು ಮಾಡಿದ ಕೆಲಸವೇ ಕಾರಣ. ದುರಾದೃಷ್ಟ ಅಂದರೆ ನಾನು ಹುಟ್ಟಿ ಬೆಳೆದ ಗಣಿ ನಾಡು ಬಳ್ಳಾರಿಯಲ್ಲಿ ಇದುವರೆಗೂ ವಿಮಾನ ನಿಲ್ದಾಣವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವಿಜಯನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿ ನಾನು ಜೂವಾಲಾಜಿಕಲ್ ಪಾರ್ಕ್ ಕಟ್ಟಿದ್ದೆ. ಅಲ್ಲಿ ನೈಟ್ ಸಫಾರಿ, ಥೀಮ್ ಪಾರ್ಕ್, ಶ್ರೀಕೃಷ್ಣದೇವರಾಯನ ಪ್ರತಿಮೆಯನ್ನು ಇಂಗ್ಲೆಂಡಿನ ಲೇಡಿ ಲಿಬರ್ಟಿ ಪ್ರತಿಮೆ ತರಹ ಮಾಡಬೇಕೆಂಬ ಆಸೆ ಇತ್ತು. ತುಂಗಭದ್ರ ನದಿಯಲ್ಲಿ ಸೌಂಡ್ ಅಂಡ್ ಲೈಟ್ ಮಾಡಬೇಕೆಂಬ ಆಸೆಯಿತ್ತು. ಈ ಕನಸುಗಳನ್ನು 13-14 ವರ್ಷಗಳ ಹಿಂದೆಯೇ ನಾನು ಕಂಡಿದ್ದೆ. ಈಗಿನ ಸರ್ಕಾರ ಈ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದರು.
ಬಳ್ಳಾರಿಗೆ ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಅಂತಾ ಎದೆ ಮೇಲೆ ಕೈ ಇಟ್ಟು ಮಾತಾಡಲಿ. ರಾಜಕೀಯಕ್ಕಾಗಿ ವಿರೋಧ ಮಾಡುವವರು ಮಾಡಬಹುದು. ಅವರು ಮನೆಯಲ್ಲಿ ಹೋಗಿ ಬಳ್ಳಾರಿ ಅಭಿವೃದ್ಧಿಗೋಸ್ಕರ ಜನಾರ್ದನ ರೆಡ್ಡಿ ಕೆಲಸ ಮಾಡಿದ್ದಾನೋ ಇಲ್ಲವೋ ಅಂತಾ ದೇವರ ಮುಂದೆ ಕೇಳಿಕೊಳ್ಳಲಿ ಎಂದರು.
ನಾನು ಹೇಳಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡರೆ ಅದು ಅವರ ಕರ್ಮ. ನನ್ನ ವಿರುದ್ಧ ಗಣಿ ಕೇಸ್ಗಳನ್ನು ಹಾಕಲಾಗಿದೆ. ನ್ಯಾಯಾಲಯ ಇದೆ, ನಾನು ಪ್ರಕರಣಗಳಿಗೆ ಹೆದರುವುದಿಲ್ಲ ಎಂದರು. ಇನ್ನು ಸರ್ಕಾರ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡಬೇಕು. ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ಕಟ್ಟಬೇಕಿದೆ. ಸರ್ಕಾರ ಈ ವಿಷಯದ ಕಲೆ ಗಮನಹರಿಸಬೇಕು ಎಂದು ಮನವಿ ಮಾಡಿಕೊಂಡರು.
ಬಳ್ಳಾರಿಯಲ್ಲಿ ಮೈನಿಂಗ್ ಟ್ಯಾಕ್ಸ್ನಿಂದ 17 ಸಾವಿರ ಕೋಟಿ ಸಂಗ್ರಹ ಆಗಿದೆ. ಈ ಹಣ ಬಳ್ಳಾರಿ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಕೋರ್ಟ್ನಲ್ಲಿ ಗಣಿ ಮಾಲೀಕರು 13 ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಈಗ ಆ ಹಣ 24 ಸಾವಿರ ಕೋಟಿಯಾಗಿದೆ. ಈ ಹಣದಿಂದ ಬಳ್ಳಾರಿ ಅಭಿವೃದ್ಧಿ ಮಾಡಬಹುದು ಎಂದು ತಿಳಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications