ಬಳ್ಳಾರಿ ಜಿಲ್ಲೆ ವಿಭಜನೆ ಬೆಂಬಲಿಸಿ ಪಶ್ಚಿಮ ತಾಲೂಕುಗಳ ಜನರಿಂದ ಪತ್ರ ಚಳುವಳಿ
ಹಗರಿಬೊಮ್ಮನಹಳ್ಳಿ, ಡಿ. 20 : ಬಳ್ಳಾರಿ ಜಿಲ್ಲೆ ವಿಭಜನೆ ಬೆಂಬಲಿಸಿ ಪಶ್ಚಿಮ ತಾಲೂಕಗಳ ಸಾರ್ವಜನಿಕರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪತ್ರ ಚಳುವಳಿ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ತಿಳಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಳ್ಳಾರಿ ಜಿಲ್ಲಾ ಕೇಂದ್ರಕ್ಕೆ ತೆರಳಲು ಪಶ್ಚಿಮ ತಾಲೂಕುಗಳ ಜನ ಪಟ್ಟ ಪರಿಪಾಟಲು ಹೇಳತೀರದಾಗಿದ್ದು ಬಳ್ಳಾರಿ ಜಿಲ್ಲೆ ವಿಭಜನೆ ಸೂಕ್ತವಾಗಿದ್ದು ಕೊಟ್ಟೂರು ಕೂಡ್ಲಿಗಿ ಹಗರಿಬೊಮ್ಮನಹಳ್ಳಿ ಹಡಗಲಿ ಹರಪನಹಳ್ಳಿ ತಾಲೂಕುಗಳ ಜನತೆ, ಮತ್ತು ಸಂಘಸಂಸ್ಥೆಗಳು ವಿಭಜನೆ ಬೆಂಬಲಿಸಿ ಪತ್ರ ಚಳುವಳಿ ನಡೆಸಲಿದ್ದೇವೆ ಎಂದು ಪತ್ರೇಶ್ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಅಖಂಡ ತಾಲೂಕುಗಳ ಅಭಿವೃದ್ಧಿ ಮಾಡದಿರುವುದೇ ವಿಭಜನೆಗೆ ಕಾರಣವಾಗಿದ್ದು ಅಖಂಡತೆ ಎಲ್ಲಾ ಕ್ಷೇತ್ರಗಳಲ್ಲೂ ಇದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಶ್ಚಿಮ ತಾಲೂಕುಗಳ ಜನರ ನಿರಂತರ ಹೋರಾಟ ಹಾಗೂ ಸಚಿವ ಆನಂದ್ ಸಿಂಗ್ ಪ್ರಬಲ ಇಚ್ಛಾಶಕ್ತಿಯಿಂದ ಜಿಲ್ಲೆ ವಿಭಜನೆಗೊಳಿಸಿ ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗೆ ಸಮಯಾವಕಾಶ ನೀಡಿದ್ದು ಇದನ್ನು ಬೆಂಬಲಿಸಿ ರಾಜ್ಯ ಕಂದಾಯ ಇಲಾಖೆ ಅಪರ ಕಾರ್ಯದರ್ಶಿಗಳಿಗೆ ಪತ್ರ ಬರೆಯುವ ಚಳುವಳಿ ನಡೆಸಲು ಪತ್ರೇಶ್ ಪಶ್ಚಿಮ ತಾಲೂಕುಗಳ ಜನರಲ್ಲಿ ಮನವಿ ಮಾಡಿದರು.

ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು. ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ. ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications