ಪ್ರಚಾರದ ತಲೆಬಿಸಿಯಲ್ಲಿ ಮತ ಹಾಕುವುದನ್ನೇ ಮರೆತ ವಿ ಎಸ್ ಉಗ್ರಪ್ಪ!
ಬಳ್ಳಾರಿ, ಏಪ್ರಿಲ್ 19: "ಮತದಾನ ಪ್ರತಿ ಭಾರತೀಯ ಪ್ರಜೆಯ ಮೂಲಭೂತ ಹಕ್ಕು, ಮತದಾನದಂಥ ಶ್ರೇಷ್ಠ ದಾನ ಬೇರೊಂದಿಲ್ಲ, ನಿಮ್ಮ ಒಂದು ಮತ ದೇಶದ ಭವಿಷ್ಯ ಬದಲಿಸಬಹುದು" ಎಂಬಿತ್ಯಾದಿ ಘೋಷಣೆಗಳನ್ನು ಕೂಗುವ ರಾಜಕೀಯ ನಾಯಕರೇ ಮತ ಚಲಾಯಿಸದಿದ್ದರೆ ಹೇಗೆ?
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಉಗ್ರಪ್ಪ ಅವರು ತಮ್ಮ ಮತವನ್ನೇ ಚಲಾಯಿಸದೆ ಅಂಥದೊಂದು ಪ್ರಮಾದ ಮಾಡಿದ್ದಾರೆ. 'ಮತ ಚಲಾಯಿಸಿ' ಎಂದು ಜನರಲ್ಲಿ ಮನವಿ ಮಾಡುವ, ಅಥವಾ ಸಲಹೆ ನೀಡುವ ಹಕ್ಕನ್ನೇ ಈ ಮೂಲಕ ಅವರು ಕಳೆದುಕೊಂಡಿದ್ದಾರೆ!
ವಿ ಎಸ್ ಉಗ್ರಪ್ಪನವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆದಿದ್ದರು. ಆದರೆ ಬಳ್ಳಾರಿಯಲ್ಲಿ ಸ್ವತಃ ಅಭ್ಯರ್ಥಿಯಾಗಿರುವುದರಿಂದ ಪ್ರಚಾರದ ತಲೆಬಿಸಿಯಲ್ಲಿದ್ದ ಅವರು ಮತದಾನ ಮಾಡುವ 'ಸಣ್ಣ' ಕಾರ್ಯಕ್ಕಾಗಿ ಬೆಂಗಳೂರಿನವರೆಗೆ ಯಾಕೆ ಬರಬೇಕು ಎಂದು ಭಾವಿಸಿ, ಮತದಾನವನ್ನೇ ಮಾಡದೆ ಉಳಿದರು!

ಅವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಲೇವಡಿ ವ್ಯಕ್ತವಾಗಿದ್ದು, 'ಅದ್ಹೇಗೆ ಮತದಾರರಲ್ಲಿ ನೀವು ಮತ ಕೇಳ್ತೀರಾ?' ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಶಾಸಕ ಶ್ರೀರಾಮಲು ಅವರ ಸಹೋದರಿ ಶಾಂತಾ ಅವರನ್ನು ಸೋಲಿಸಿ ಸಂಸದರಾಗಿದ್ದ ವಿ ಎಸ್ ಉಗ್ರಪ್ಪ ಅವರನ್ನು ಕಾಂಗ್ರೆಸ್ ಮತ್ತೊಮ್ಮೆ ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ವೈ.ದೇವೇಂದ್ರಪ್ಪ ಅವರು ಕಣದಲ್ಲಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಹೊರಬೀಳಲಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications