ಪ್ರಚಾರದ ತಲೆಬಿಸಿಯಲ್ಲಿ ಮತ ಹಾಕುವುದನ್ನೇ ಮರೆತ ವಿ ಎಸ್ ಉಗ್ರಪ್ಪ!
ಬಳ್ಳಾರಿ, ಏಪ್ರಿಲ್ 19: "ಮತದಾನ ಪ್ರತಿ ಭಾರತೀಯ ಪ್ರಜೆಯ ಮೂಲಭೂತ ಹಕ್ಕು, ಮತದಾನದಂಥ ಶ್ರೇಷ್ಠ ದಾನ ಬೇರೊಂದಿಲ್ಲ, ನಿಮ್ಮ ಒಂದು ಮತ ದೇಶದ ಭವಿಷ್ಯ ಬದಲಿಸಬಹುದು" ಎಂಬಿತ್ಯಾದಿ ಘೋಷಣೆಗಳನ್ನು ಕೂಗುವ ರಾಜಕೀಯ ನಾಯಕರೇ ಮತ ಚಲಾಯಿಸದಿದ್ದರೆ ಹೇಗೆ?
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಉಗ್ರಪ್ಪ ಅವರು ತಮ್ಮ ಮತವನ್ನೇ ಚಲಾಯಿಸದೆ ಅಂಥದೊಂದು ಪ್ರಮಾದ ಮಾಡಿದ್ದಾರೆ. 'ಮತ ಚಲಾಯಿಸಿ' ಎಂದು ಜನರಲ್ಲಿ ಮನವಿ ಮಾಡುವ, ಅಥವಾ ಸಲಹೆ ನೀಡುವ ಹಕ್ಕನ್ನೇ ಈ ಮೂಲಕ ಅವರು ಕಳೆದುಕೊಂಡಿದ್ದಾರೆ!
ವಿ ಎಸ್ ಉಗ್ರಪ್ಪನವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆದಿದ್ದರು. ಆದರೆ ಬಳ್ಳಾರಿಯಲ್ಲಿ ಸ್ವತಃ ಅಭ್ಯರ್ಥಿಯಾಗಿರುವುದರಿಂದ ಪ್ರಚಾರದ ತಲೆಬಿಸಿಯಲ್ಲಿದ್ದ ಅವರು ಮತದಾನ ಮಾಡುವ 'ಸಣ್ಣ' ಕಾರ್ಯಕ್ಕಾಗಿ ಬೆಂಗಳೂರಿನವರೆಗೆ ಯಾಕೆ ಬರಬೇಕು ಎಂದು ಭಾವಿಸಿ, ಮತದಾನವನ್ನೇ ಮಾಡದೆ ಉಳಿದರು!

ಅವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಲೇವಡಿ ವ್ಯಕ್ತವಾಗಿದ್ದು, 'ಅದ್ಹೇಗೆ ಮತದಾರರಲ್ಲಿ ನೀವು ಮತ ಕೇಳ್ತೀರಾ?' ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಶಾಸಕ ಶ್ರೀರಾಮಲು ಅವರ ಸಹೋದರಿ ಶಾಂತಾ ಅವರನ್ನು ಸೋಲಿಸಿ ಸಂಸದರಾಗಿದ್ದ ವಿ ಎಸ್ ಉಗ್ರಪ್ಪ ಅವರನ್ನು ಕಾಂಗ್ರೆಸ್ ಮತ್ತೊಮ್ಮೆ ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ವೈ.ದೇವೇಂದ್ರಪ್ಪ ಅವರು ಕಣದಲ್ಲಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಹೊರಬೀಳಲಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications