ಸಂಡೂರಿನ ನೂರಾರು ಎಕರೆ ಅರಣ್ಯ ಭೂಮಿಯಲ್ಲಿ ರೈತರ ಉಳುಮೆ: ಸಂಸದರಿಂದ ಅಭಯ
ಬಳ್ಳಾರಿ, ಸೆಪ್ಟೆಂಬರ್ 10: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಂ.ಲಕ್ಲಹಳ್ಳಿ ಸುತ್ತಲೂ ಇರುವ ನೂರಾರು ಎಕರೆ ಅರಣ್ಯ ಭೂಮಿಯಲ್ಲಿ ರೈತರು ಉಳುಮೆ ಮಾಡುತ್ತಿರುವುದನ್ನು ಮನಗಂಡ ಅರಣ್ಯ ಇಲಾಖೆಯ ಅಧಿಕಾರಿಗಳು, ಉಳುಮೆ ಮಾಡುವುದನ್ನು ತಡೆದು ಆ ಭೂಮಿಯಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಇದರಿಂದ ನೂರಾರು ರೈತ ಕುಟುಂಬಗಳು ಬೀದಿ ಪಾಲಾಗುವುದನ್ನು ಸೂಕ್ಷ್ಮವಾಗಿ ಅರಿತುಕೊಂಡ ಬಳ್ಳಾರಿಯ ಸಂಸದ ವೈ.ದೇವೇಂದ್ರಪ್ಪ, ಕೂಡಲೇ ಎಂ.ಲಕ್ಲಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು, ರೈತರನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅರಣ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಸತತ 60 ವರ್ಷಗಳಿಂದಲೂ ಈ ಭೂಮಿಯಲ್ಲಿ ರೈತರು ಉಳುಮೆ ಮಾಡುತ್ತಾ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಈಗ ದಿಢೀರನೆ ಉಳುಮೆ ಮಾಡೋದನ್ನು ಬಿಡಿಸಿ ಗಿಡ-ಮರಗಳನ್ನು ನೆಡಲು ಮುಂದಾಗಿರುವುದು ತರವಲ್ಲ ಎಂದು ಸಂಸದರು ಹೇಳಿದರು.

ಈ ಸಂಬಂಧ ಅರಣ್ಯ ಸಚಿವ ಆನಂದಸಿಂಗ್ ಅವರೊಂದಿಗೆ ಚರ್ಚಿಸಿ, ಅರಣ್ಯ ಇಲಾಖೆಯ ಸುಪರ್ದಿಗೆ ಒಳಪಡುವ ಈ ಭೂಮಿಯನ್ನ ರೈತರ ಉಳುಮೆಗೆ ಅವಕಾಶ ನೀಡುವಂತೆ ಕೋರುವೆ. ಅಂದಾಜು 150 ಎಕರೆಯ ಭೂಮಿಯಲ್ಲಿ ನಾನಾ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ ಎಂದರು.

ಹೀಗಾಗಿ, ಅರಣ್ಯ ಅಧಿಕಾರಿಗಳು ರೈತರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ನಾನು ಸಚಿವರೊಂದಿಗೆ ಚರ್ಚಿಸಿ ಉಳುಮೆ ಮಾಡಲು ಅವಕಾಶ ಕಲ್ಪಿಸಿಕೊಡುವುದಾಗಿ ಅಲ್ಲಿ ನೆರೆದಿದ್ದ ರೈತರಿಗೆ ಸಂಸದ ವೈ.ದೇವೇಂದ್ರಪ್ಪ ಭರವಸೆ ನೀಡಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications