ಶಾಸಕರ ದುಂಡಾವರ್ತನೆ: ನವೆಂಬರ್ 11 ರಂದು ಹಗರಿಬೊಮ್ಮನಹಳ್ಳಿ ಬಂದ್
ಬಳ್ಳಾರಿ, ನವೆಂಬರ್ 9: ಶಾಸಕ ಭೀಮಾನಾಯ್ಕ್ ಅವರ ದುಂಡಾವರ್ತನೆ ಖಂಡಿಸಿ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕನ್ನು ಬಂದ್ ಮಾಡಲು ಕರೆ ನೀಡಲಾಗಿದೆ.
ನವೆಂಬರ್ 11 ರಂದು ಬೆಳಗ್ಗೆ 9 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಿ, ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಮಾಜಿ ಬಿಜೆಪಿ ಶಾಸಕ ನೇಮಿರಾಜ್ ನಾಯ್ಕ್ ಹೇಳಿದ್ದಾರೆ.
ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಅವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ನವೆಂಬರ್ 11 ರಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಬೂತ್ ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಬಂದ್ ನಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ರೌಡಿಸಂ ಮೂಲಕ ಮೆರೆಯುತ್ತಿರುವ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ದುರ್ವರ್ತನೆ ವಿರುದ್ಧ ಪ್ರತಿಭಟನೆಗೆ ಸಾರ್ವಜನಿಕರು ಸಹ ಸ್ಪಂದಿಸಬೇಕೆಂದು ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚಿಗೆ ಶಾಸಕ ಭೀಮಾನಾಯ್ಕ ಅವರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂದು ಕೆಲಕಾಲ ಪುರಸಭೆ ಚುನಾವಣೆಯ ಸಂದರ್ಭದಲ್ಲಿ ಮಾಜಿ ಶಾಸಕ ನೇಮಿರಾಜನಾಯ್ಕ ಮತ್ತು ಕಾರ್ಯಕರ್ತರು ಚುನಾವಣೆ ಪ್ರಕ್ರಿಯೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.
ಹಗರಿಬೊಮ್ಮನಹಳ್ಳಿಯ ಹಾಲಿ ಶಾಸಕ ಭೀಮಾನಾಯ್ಕ ಅವರು ತಮ್ಮ ಬೆಂಬಲಿಗರೊಂದಿಗೆ ಪುರಸಭೆ ಕಾರ್ಯಾಲಯದೊಳಗೆ ಕಾರಿನಲ್ಲಿ ಬಂದಿಳಿದಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಶಾಸಕ ಭೀಮಾನಾಯ್ಕ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕಿಳಿದಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications