Ballari: ಮುಂಗಾರು ಪೂರ್ವ ಮಳೆಯ ಅಪಾಯಗಳನ್ನು ತಡೆಯಲು ಆರೋಗ್ಯ ಇಲಾಖೆ ಕಟ್ಟೆಚ್ಚರ
ಬಳ್ಳಾರಿ, ಮೇ 24: ಮುಂಗಾರು ಪೂರ್ವ ಮಳೆ ಆರಂಭದ ಹಿನ್ನಲೆಯಲ್ಲಿ ಸಾರ್ವಜನಿಕರು ಮನೆಯ ಸುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಈ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಯ ಬೇಕು ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ. ರಮೇಶ್ಬಾಬು ಸಾರ್ವಜನಿಕರಿಗೆ ತಿಳಿಸಿದರು.
ನೀರಿನ ಸಂಗ್ರಹಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸುವುದು ಮತ್ತು ಚರಂಡಿಗಳಲ್ಲಿ ಕಸ-ಕಡ್ಡಿಗಳನ್ನು ಹಾಕದಂತೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಂಡಲ್ಲಿ ಸೊಳ್ಳೆಯಿಂದ ಹರಡುವ ರೋಗಗಳನ್ನು ತಡೆಯಬಹುದು ಎಂದು ತಿಳಿಸಿದರು.

ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುಶಲೋಪರಿ ವಿಚಾರಿಸಿ ಮಾತನಾಡಿಸಿದ ಅವರು, ಮಳೆ ನೀರು ಮನೆಯ ಸುತ್ತಲು ಹಾಗೂ ಮನೆಯ ಮೇಲ್ಭಾಗದಲ್ಲಿ, ಹೂವಿನ ಕುಂಡಗಳಲ್ಲಿ, ಟಿನ್, ಪ್ಲಾಸ್ಟಿಕ್ ಕಪ್ ಮುಂತಾದವುಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂದು ಹೇಳಿದರು.
ನೀರು ಸಂಗ್ರಾಹಕಗಳಾದ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಡಿಕೆ ಮುಂತಾದವುಗಳನ್ನು ನೀರು ತುಂಬಿಸುವ ಪೂರ್ವದಲ್ಲಿ ಚೆನ್ನಾಗಿ ತೊಳೆದು ಸರಿಯಾಗಿ ಮುಚ್ಚಳ ಮುಚ್ಚುವ ಮೂಲಕ ಸೊಳ್ಳೆ ನಿಯಂತ್ರಣವನ್ನು ಕೈಗೊಳ್ಳಬೇಕು ಎಂದರು.
ಮಾನ್ಸೂನ್ ಮಳೆಯ ಆರಂಭಿಕ ಹಿನ್ನಲೆಯಲ್ಲಿ ಮಳೆ, ಗುಡುಗು-ಮಿಂಚು ಸಹಿತ ಬರುವುದರಿಂದ ಬಯಲಿನಲ್ಲಿದ್ದರೆ ತಕ್ಷಣವೇ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಬೇಕು. ತಗ್ಗು ಪ್ರದೇಶ ಇಲ್ಲದೇ ಬಯಲಿನಲ್ಲಿಯೇ ಇರಬೇಕಾದರೆ ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಬೇಕು, ಇದರಿಂದ ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿದ್ದ ಪ್ರದೇಶದಲ್ಲಿ ಇದ್ದರೆ ಆದಷ್ಟು ಅಲ್ಲಿಂದ ಬೇಗನೆ ಹೊರಬರುವುದು ಉತ್ತಮ ಎಂದು ಸಿಡಿಲಿನ ಹೊಡೆತದಿಂದ ತಪ್ಪಿಸಿಕೊಳ್ಳುವ ಬಗ್ಗೆ ವಿವರಿಸಿದರು.
ಮಳೆಯ ಹಿನ್ನಲೆಯಲ್ಲಿ ನೀರಿನ ಮೂಲಗಳಿಗೆ ಹೊಸ ನೀರು ಬರುವುದರಿಂದ ಆಕಸ್ಮಿಕವಾಗಿ ಶುದ್ಧಿಕರಿಸದೇ ಇರುವ ನೀರನ್ನು ಕುಡಿಯಬಾರದು. ವಾಂತಿ ಬೇಧಿ ಉಂಟಾಗುವ ಸಾದ್ಯತೆಗಳು ಇರುತ್ತವೆ. ಕ್ಲೋರಿನೇಷನ್ ಕೈಗೊಂಡು ಶುದ್ಧಿಕರೀಸಿದ ಕುಡಿಯುವ ನೀರನ್ನು ಹಾಗೂ ಶುದ್ದೀಕರಣ ಘಟಕದ ನೀರನ್ನು ಕುಡಿಯಬೇಕು. ಸಾಧ್ಯವಿದ್ದಲ್ಲಿ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಊಟದ ಪೂರ್ವ, ಶೌಚದ ನಂತರ ಕೈಗಳನ್ನು ಸಾಬೂನುನಿಂದ ತೊಳೆದುಕೊಳ್ಳಬೇಕು ಎಂದು ಡಿಹೆಚ್ಓ ಅವರು ತಿಳಿಸಿದರು.
ಒಂದು ವೇಳೆ ಅನಾರೋಗ್ಯಕ್ಕೀಡಾದರೆ, ಆಸ್ಪತ್ರೆಗಳಲ್ಲಿ ಈಗಾಗಲೇ ಎಲ್ಲಾ ಅಗತ್ಯ ಔಷಧಿಗಳ ದಾಸ್ತಾನು ಇರಿಸಲಾಗಿದ್ದು, ಯಾರು ಆತಂಕಕ್ಕೆ ಒಳಗಾಗದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯಬೇಕು ಎಂದು ಜನರಲ್ಲಿ ವಿನಂತಿಸಿದರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications