ಬಳ್ಳಾರಿಯಲ್ಲಿ ₹5.6 ಕೋಟಿ ನಗದು, 3 ಕೆಜಿ ಚಿನ್ನಾಭರಣ ವಶ
ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಗಣಿ ನಾಡು ಎಂದೇ ಖ್ಯಾತವಾಗಿರುವ ಬಳ್ಳಾರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ಹಣ ಮತ್ತು ನೂರಾರು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
₹5.60 ಕೋಟಿ ನಗದು, 3 ಕೆಜಿ ಚಿನ್ನ, 103 ಕೆ.ಜಿ. ಬೆಳ್ಳಿಯ ಆಭರಣಗಳನ್ನು ಬಳ್ಳಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಒಟ್ಟು 7.60 ಕೋಟಿ ಮೌಲ್ಯದ ಹಣ, ನಗದು ವಶಕ್ಕೆ ಪಡೆಯಲಾಗಿದೆ.

ಜ್ಯುವೆಲ್ಲರಿ ಮಾಲೀಕ ನರೇಶ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನರೇಶ್ ಎನ್ನುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಹವಾಲಾ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 98 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಫಲಿತಾಂಶಗಳನ್ನು ಹೆಚ್ಚಿನ ವಿಚಾರಣೆಗಾಗಿ ಆದಾಯ ತೆರಿಗೆ ಇಲಾಖೆಗೆ ರವಾನಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications