ಸೋಲಿನತ್ತ ಶ್ರೀರಾಮುಲು: ಒಳ ಹೊಡೆತ ಕೊಟ್ಟರೇ ಆಪ್ತಮಿತ್ರ ಜನಾರ್ದನ ರೆಡ್ಡಿ?
ಬಳ್ಳಾರಿ, ಮೇ 13: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕಾಗಿ ರಾಜ್ಯ ಕಾಯುತ್ತಿದೆ. ಮತ ಎಣಿಕೆ ಆರಂಭವಾದ ಸಮಯದಿಂದ ಬಿಜೆಪಿ ನಾಯಕರಿಗೆ ಶಾಕ್ ಆಗಿದ್ದು, ಪ್ರಮುಖ ನಾಯಕರೇ ಹಿನ್ನೆಡೆ ಸಾಧಿಸುತ್ತಿರುವುದು ಪಕ್ಷಕ್ಕೆ ತಲೆ ನೋವಾಗಿದೆ.
ಬಳ್ಳಾರಿಗ್ರಾಮೀಣ ಕ್ಷೇತ್ರದಲ್ಲಿ ಒಂಬತ್ತನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಗೆಲುವಿನತ್ತ ಸಾಗುತ್ತಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲುಗೆ ಹಿನ್ನಡೆಯಾಗುತ್ತಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ 5,862 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 5032 ಮತಗಳನ್ನು ಪಡೆದಿದ್ದರು. 830 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದರು.
ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ 15079 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 12203 ಮತಗಳನ್ನು ಪಡೆದಿದ್ದರು. 2876 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಐದನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ 27,000 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 18601 ಮತಗಳನ್ನು ಪಡೆದಿದ್ದು, 9199 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಒಂಬತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ 54,889 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 32160 ಪಡೆದಿದ್ದು, ಬರೋಬ್ಬರಿ 22,729 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ನಾಗೇಂದ್ರ ಗೆಲುವಿನತ್ತ ಸಾಗುತ್ತಿದ್ದರೆ, ಶ್ರೀರಾಮುಲುಗೆ ತೀವ್ರ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಗೆಲುವಿನ ನಿರೀಕ್ಷೆಯಲಿದ್ದ ಶ್ರೀರಾಮುಲುಗೆ ಆಪ್ತಮಿತ್ರ ಜನಾರ್ದನ ರೆಡ್ಡಿ ಅವರ ನಡೆಯಿಂದ ಹಿನ್ನಡೆಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ತಮ್ಮ ತವರು ಜಿಲ್ಲೆಯಾದ ಬಳ್ಳಾರಿಯಲ್ಲಿ ಹಿಡಿತ ಹೊಂದಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ ಪರೋಕ್ಷವಾಗಿ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದಾರಾ ಎನ್ನುವ ಅನುಮಾನ ಮೂಡಿದೆ ಎನ್ನಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications