Ballari utsav: ಗಾಯಕಿ ಮಂಗ್ಲಿ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು
ಬಳ್ಳಾರಿ, ಜನವರಿ, 22: ಗಾಯಕಿ ಮಂಗ್ಲಿ ಬಳ್ಳಾರಿ ಉತ್ಸವಕ್ಕೆ ಬಂದಿದ್ದು, ಈ ವೇಳೆ ಮಂಗ್ಲಿ ಕಾರಿನ ಗ್ಲಾಸ್ ಅನ್ನು ಕೆಲ ಕಿಡಿಗೇಡಿಗಳು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹೇಳುವ ಮೂಲಕ ತನ್ನದೇ ಆದ ಚಾಪು ಮೂಡಿಸಿರುವ ಗಾಯಕಿ ಮಂಗ್ಲಿ ಬಳ್ಳಾರಿ ಉತ್ಸವಕ್ಕೂ ಆಗಮಿಸಿದ್ದರು. ಇನ್ನೇನು ಕಾರ್ಯಕ್ರಮ ಮುಗಿಸಿ ಬರುವ ವೇಳೆಗೆ ಕಿಡಿಗೇಡಿಗಳು ಗಾಯಕಿ ಮಂಗ್ಲಿ ಕಾರಿನ ಗ್ಲಾಸನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗ್ಲಿ ಕಾರಿನ ಗ್ಲಾಸ್ ಪುಡಿ ಪುಡಿ
ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿನ ವೇದಿಕೆ ಮೇಲೆ ಹಾಡುಗಳನ್ನು ಹೇಳಿ ಹಿಂತಿರುಗುವಾಗ ಮಂಗ್ಲಿ ಅವರನ್ನು ನೋಡಲು ಯುವಕರು ಮುಗಿಬಿದ್ದಿದ್ದರು. ಆಗ ಕೆಲ ಪುಂಡರು ವೇದಿಕೆ ಹಿಂಭಾಗದಲ್ಲಿದ್ದ ಮೇಕಪ್ ಟೆಂಟ್ಗೆ ನುಗಿದ್ದಾರೆ. ಅಲ್ಲದೇ ಮಂಗ್ಲಿ ಹೋಗುತ್ತಿದ್ದ ಕಾರಿಗೂ ಕಲ್ಲು ಎಸೆದಿದ್ದು, ಕೂಡಲೇ ಪೋಲಿಸರು ಲಘು ಲಾಟಿ ಪ್ರಹಾರ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಬಳ್ಳಾರಿ ಉತ್ಸವಕ್ಕೆ ಆಗಮಿಸಿದ್ದ ಮಂಗ್ಲಿ
ಗಾಯಕಿ ಮಂಗ್ಲಿ ಇದೀಗ ಬಹುಭಾಷೆಯ ಸಿನಿಮಾಗಳಿಗೆ ಹಾಡುತ್ತಾರೆ. ಮಂಗ್ಲಿಗೆ ಅವರದ್ದೇ ಆದ ಅಪಾರ ಅಭಿಮಾನಿಗಳ ಬಳಗವೇ ಇದೆ. ಹಾಗೆಯೇ ಕರ್ನಾಟಕದಲ್ಲೂ ಮಂಗ್ಲಿ ಗಾಯನಕ್ಕೆ ಯುವಪೀಳಿಗೆಯ ಬಹಳಷ್ಟು ಮನಸೋತಿದ್ದಾರೆ. ಇತ್ತೀಚೆಗಷ್ಟೇ ನಡೆದ ಚಿಕ್ಕಬಳ್ಳಾಪುರ ಉತ್ಸವಕ್ಕೂ ಮಂಗ್ಲಿ ಆಗಮಿಸಿ, ತಮ್ಮ ಹಾಡಿನ ಮೂಲಕ ಅಲ್ಲಿದ್ದ ಜನರನ್ನು ರಂಜಿಸಿದ್ದರು. ಇದೀಗ ಬಳ್ಳಾರಿ ಉತ್ಸವದಲ್ಲಿ ಹಾಡಿನ ಮೂಲಕ ಜನರನ್ನು ರಂಜಿಸಲು ಬಂದಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಮಂಗ್ಲಿ ಅವರ ಕಾರಿನ ಗ್ಲಾಸ್ ಅನ್ನು ಕಲ್ಲಿನಿಂದ ಹೊಡೆದ ಪುಡಿ ಪುಡಿ ಮಾಡಿದ್ದಾರೆ.

ಮಂಗ್ಲಿ ಕಾರಿನ ಗ್ಲಾಸ ಅನ್ನು ಪುಂಡರು ಹೊಡೆದು ಹಾಕಿದ ಘಟನೆ ಶನಿವಾರ (ಜನವರಿ 21) ರಾತ್ರಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆದಿದೆ. ಇನ್ನು ಬಳ್ಳಾರಿ ಉತ್ಸವದಲ್ಲಿ ಸಾವಿರಾರು ಜನ ಸೇರಿದ್ದು, ಅನುಶ್ರೀ ಮತ್ತು ಅರ್ಜುನ್ ಜನ್ಯ ಸೇರಿದಂತೆ ಹಲವು ಕಲಾವಿದರು ಭಾಗಿಯಾದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications