ಬಳ್ಳಾರಿ ವಿಮ್ಸ್ ಆಸ್ಪತ್ರೆಯ ದುರಂತ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ
ಬಳ್ಳಾರಿ ಸೆಪ್ಟೆಂಬರ್ 15: ''ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ (ಸೆಪ್ಟೆಂಬರ್ 14) ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ'' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಎರಡು ಅನಿರೀಕ್ಷಿತ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ತನಿಖೆ ನಡೆಸುವ ಸಲುವಾಗಿ ಐದು ಸದಸ್ಯರನ್ನೊಳಗೊಂಡಂತೆ ಸಮಿತಿಯೊಂದನ್ನು ರಚಿಸಲಾಗಿದೆ. ಜೊತೆಗೆ ಈ ಸದಸ್ಯರಿಗೆ ತುರ್ತಾಗಿ ವರದಿಯನ್ನು ನೀಡುವಂತೆ ಕೋರಲಾಗಿದೆ.
ಈ ಉನ್ನತಮಟ್ಟದ ಸಮಿತಿಯಲ್ಲಿ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಡಾ. ಸ್ಮಿತಾ ಅವರನ್ನು ಅಧ್ಯಕ್ಷರಾಗಿ, ಜಂಟಿ ನಿರ್ದೇಶಕ ಡಾ. ಸಿದ್ದಿಕಿ, ಜನರಲ್ ಮೆಡಿಸಿನ್ ವಿಭಾಗದ ಡಾ. ದಿವಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಪಾಲಕ ಅಭಿಯಂತರು ಯೋಗೇಶ್ ಹಾಗೂ ವೈದ್ಯಕೀಯ ಶಕ್ಷಿಣ ನಿರ್ದೇಶಶನಾಲಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ ಉಮಾ ಅವರನ್ನು ಸದಸ್ಯರಾಗಿದ್ದಾರೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.
— Dr Sudhakar K (@mla_sudhakar) September 15, 2022
1/2 pic.twitter.com/IpDT27HCcZ

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡ ಪರಿಣಾಮ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವೆಂಟಿಲೇಟರ್ ಮೇಲ್ಲಿದ್ದ ರೋಗಿಗಳಾದ ಮೌಲಾ ಹುಸೇನ್ ಹಾಗೂ ಚೆಟ್ಟೆಮ್ಮ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬ ರೋಗಿ ಸಹ ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿದ್ದ 10 ರೋಗಿಗಳ ಪೈಕಿ, ಈ ಮೂವರು ರೋಗಿಗಳು ಅಸುನೀಗಿದ್ದಾರೆ. ಘಟನೆ ನಡೆದ ಬಳಿಕ ವಿಮ್ಸ್ ಆಸ್ಪತ್ರೆಯವಿರುದ್ಧ ಮೃತರ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ಸಂಬಂಧಿಕರ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ ಆರಂಭದಲ್ಲಿ ಮೃತ ಸಂಬಂಧಿಕರ ಆರೋಪಕ್ಕೆ ಆಸ್ಪತ್ರೆ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಲು ನಿರಾಕರಿಸಿದ್ದಾರೆ. ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಮಾತನಾಡಿ ಮೃತ ಸಂಬಂಧಿಕರ ಆರೋಪವನ್ನು ತಳ್ಳಿ ಹಾಕಿದ್ದಾರೆ.
ನಿರ್ದೇಶಕ ಡಾ. ಗಂಗಾಧರ ಗೌಡ ಮಾತನಾಡಿ, 'ವಿಮ್ಸ್ ಆಸ್ಪತ್ರೆಯಲ್ಲಿ ಆಗಿರುವ ಸಾವುಗಳು ವಿವಿಧ ತೀವ್ರತರದ ಆರೋಗ್ಯ ಸಮಸ್ಯೆ ಗಳಿಂದ ಸಂಭವಿಸಿವೆ. ಒಬ್ಬ ರೋಗಿಯು ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ; ಇನ್ನೊಬ್ಬ ಮೃತರು ಬಹು ಅಂಗಾಗ ವೈಫಲ್ಯದಿಂದ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ, ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿರುತ್ತಾರೆ. ಹಾಗೆಯೇ ಮತ್ತೊಬ್ಬ ರೋಗಿಯು ಹಲವಾರು ದಿನಗಳಿಂದ ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದು ಕೊನೆಗೆ ಬಹು ಅಂಗಾಗಳ ಸೋಂಕಿನಿಂದ ಸಹಜ ಸಾವನ್ನಪ್ಪಿದ್ದಾರೆ. ವಿಮ್ಸ್ ಆಸ್ಪತ್ರೆಯು ಉನ್ನತ ಚಿಕಿತ್ಸಾ ಕೇಂದ್ರವಾಗಿದ್ದು ಎಲ್ಲಾ ಕೇಂದ್ರಗಳಲ್ಲಿ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಕೊನೆಗೆ ಪರಿಸ್ಥಿತಿ ಉಲ್ಬಣಗೊಂಡ ನಂತರ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವುದರಿಂದ ಸಾವುಗಳು ಆಗುವ ಸಂಭವನೀಯತೆ ಹೆಚ್ಚಾಗುತ್ತದೆ. ಬೆಳಗ್ಗೆ ಅದೇ ಸಮಯದಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದ್ದು, ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ' ಎಂದು ಈ ಮೂಲಕ ಸಾರ್ವಜನಿಕರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದಿದ್ದಾರೆ.
ಗಂಗಾಧರ ಮೃತರ ಆರೋಪಗಳನ್ನು ತಳ್ಳಿಹಾಕಿದ ಕೂಡಲೆ ಪ್ರಕರಣ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿದೆ. ಹೀಗಾಗಿ ಘಟನೆಯ ತನಿಖಗೆ ಒತ್ತಡಗಳು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಸಮಿತಿ ರಚಿಸುವ ಮೂಲಕ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಕೋಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications