ಜಮೀರ್ ಅಹ್ಮದ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಬಳ್ಳಾರಿ ಪೊಲೀಸ್
Recommended Video
ಬಳ್ಳಾರಿ, ಜನವರಿ 12: ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಪೌರತ್ವ ಕಾಯ್ದೆಯ ವಿಚಾರವಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದರು, ಆದ ಕಾರಣ ನಾಳೆ ಕಾಂಗ್ರೆಸ್ ನ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದರು.
ಈ ಬಗ್ಗೆ ಮಾತನಾಡಿರುವ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ""ಇಂದು ನಡೆಯುವ ಜಮೀರ್ ಅಹ್ಮದ್ ಅವರ ಪ್ರತಿಭಟನೆಗೆ ಅನುಮತಿ ನೀಡಿಲ್ಲಾ ಎಂದು ಹೇಳಿದ್ದಾರೆ. ಕಾನೂನು ಮೀರಿ ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ'' ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಪ್ರತಿಭಟನೆ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು , ಆದರೆ ಈವರೆಗೂ ಜಮೀರ್ ಅಹ್ಮದ್ ಕಡೆಯವರು ಅನುಮತಿ ಪಡೆದುಕೊಂಡಿಲ್ಲಾ, ಕೇವಲ ಎಸ್ಪಿ ಕಚೇರಿಗೆ ಬಂದು ಮನವಿ ಪತ್ರ ನೀಡಿದ್ದಾರೆ. ಅವರು ನೀಡಿದ ಮನವಿ ಪತ್ರಕ್ಕೆ ನಮ್ಮ ಕಚೇರಿಯಿಂದ ಸೀಲ್ ಹಾಕಿಕೊಟ್ಟಿದ್ದಾರೆ ಅಷ್ಟೇ. ಹಾಗೆಂದ ಮಾತ್ರಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ ಎಂದು ಅರ್ಥ ಅಲ್ಲ ಎಂದು ಎಸ್ಪಿ ಹೇಳಿದರು.

ಇದೇ ಸಂದರ್ಭದಲ್ಲಿ ಸೋಮಶೇಖರ್ ರೆಡ್ಡಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ ಹಿನ್ನೆಲೆ ಅವರ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಅಲ್ಲದೇ ಪ್ರಕರಣ ತನಿಖೆ ನಡೆಯುತ್ತಿದೆ, ಇನ್ನು ಅವರನ್ನು ಬಂಧಿಸಬೇಕೋ, ಬೇಡವೋ ಎಂಬುದು ತನಿಖಾ ಅಧಿಕಾರಿಯ ವಿವೇಚನೆಗೆ ಬಿಟ್ಟಿದ್ದು. ಹೀಗಾಗಿ ಇನ್ನು ಯಾಕೆ ಬಂಧಿಸಿಲ್ಲಾ ಎನ್ನುವುದಕ್ಕೆ ಉತ್ತರ ಕೊಡಲು ಆಗುವುದಿಲ್ಲ. ಅಲ್ಲದೇ ಪ್ರಕರಣ ಸಂಬಂಧ ಹೆಚ್ಚಿನ ಸಾಕ್ಷಾಧಾರಗಳನ್ನು ಸಂಗ್ರಹಿಸಲಾಗಿದೆ. ಆದಷ್ಟು ಬೇಗ ಚಾರ್ಜ್ ಸೀಟ್ ಸಲ್ಲಿಸಲಾಗುವುದು ಎಂದರು.
ಬಳ್ಳಾರಿಯಲ್ಲಿ ಇಂದು ಮಾತನಾಡಿದ ಸೋಮಶೇಖರ್ ರೆಡ್ಡಿ, ""ಜಮೀರ್ ಅಹ್ಮದ್ ಒಬ್ಬ ಪ್ರಚಾರ ಪ್ರಿಯ. ಹೀಗಾಗಿ ನಾಳೆ ನಮ್ಮ ಮನೆಗೆ ಬರುತ್ತೇನೆ ಎಂದಿದ್ದಾರೆ. ಬೇಕಿದ್ದರೆ ಜಮೀರ್ ಅಹ್ಮದ್ ಬಳ್ಳಾರಿಗೆ ಬರಲಿ ಅದಕ್ಕೆ ನಾ ಬೇಡ ಅನ್ನಲ್ಲ ಎಂದರು.

ಅಲ್ಲದೇ ನಾ ಮೊನ್ನೆ ಮಾತನಾಡಿದ್ದು ದೇಶ ದ್ರೋಹಿಗಳಿಗೆ, ನನ್ನ ದೇಶದ ಆಸ್ತಿ ಪಾಸ್ತಿ ಹಾನಿ ಮಾಡುತಿದ್ದಾರೆ, ಈ ದೇಶದ ಪ್ರಜೆ ಆಗಿ ನನಗೆ ನೋವಾಗುತ್ತದೆ. ಆ ನೋವು ಸಹಿಸದೆ ಹಾಗೆ ಹೇಳಿದ್ದೇನೆ. ಆದರೆ ನನ್ನ ಆ ಹೇಳಿಕೆಯನ್ನು ಕಾಂಗ್ರೆಸ್ ಈಗ ಬಳಸಿಕೊಳ್ಳುತ್ತಿದೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications