ಬಳ್ಳಾರಿ: ಕಾಣೆಯಾಗಿದ್ದ ಮೂವರು ಬಾಲಕರು ಶವವಾಗಿ ಪತ್ತೆ
ಬಳ್ಳಾರಿ, ಜೂನ್ 06 : ಜೂನ್ 04 (ರವಿವಾರ) ರ ಸಂಜೆ ಮನೆಯಿಂದ ಕಾಣೆಯಾಗಿದ್ದ ಮೂವರು ಬಾಲಕರು ಶವವಾಗಿ ಪತ್ತೆಯಾಗಿದ್ದಾರೆ.
ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಮೂವರು ಬಾಲಕರು ಆಟವಾಡಲೆಂದು ಹೊರ ಹೋಗಿ ಜೂನ್ 04 (ರವಿವಾರ)ದಿಂದ ಕಾಣೆಯಾಗಿದ್ದರು. ಆದರೆ, ಇಂದು (ಮಂಗಳವಾರ) ಮೂವರು ಬಾಲಕರ ಮೃತದೇಹಗಳು ಗ್ರಾಮದ ಹೊರವಲಯದ ಕೆರೆಯೊಂದರಲ್ಲಿ ಪತ್ತೆಯಾಗಿವೆ.
ಮಾರುತಿ (10), ಮಹ್ಮದ್ ಸುಭಾನಿ(7) ಮತ್ತು ಗುರುರಾಜ್(9) ಮೃತಪಟ್ಟ ಬಾಲಕರು. ಈ ಮೂವರು ಬಾಲಕರು ಕಾಣೆಯಾದ ಬಗ್ಗೆ ಕೂಡ್ಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು. ಪೊಲೀಸರು ಬಾಲಕರ ಪತ್ತೆಗಾಗಿ ಶೋಧ ನಡೆಸುತ್ತಿದ್ದರು.
ಇಂದು ಮುಂಜಾನೆ ಮೂವರು ಬಾಲಕರ ಶವಗಳು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿವೆ. ಹೀಗಾಗಿ ಬಾಲಕರು ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮೂವರು ಬಾಲಕರ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
English summary
3 boys body found in lake on Tuesday, who missing from Bandri village, Sandur taluk, Bellary district on June 04.
Story first published: Tuesday, June 6, 2017, 15:33 [IST]