Get Updates
Get notified of breaking news, exclusive insights, and must-see stories!

ರಕ್ಷಾ ಬಂಧನಕ್ಕೆ ಭಾರತೀಯ ಸೈನಿಕರಿಗೆ 900 ರಾಖಿ ಕಳುಸಿದ ಬಳ್ಳಾರಿ ಯುವತಿ

ಬಳ್ಳಾರಿ, ಆಗಸ್ಟ್‌ 12: ಕರ್ನಾಟಕದ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬ 23 ವರ್ಷದ ಯುವತಿ ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ 900 ರಾಖಿಗಳನ್ನು ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸೇನಾ ಸಂಘಟನೆಯಾದ ಯೋಧ ನಮನ ಮೂಲಕ ವಿದ್ಯಾ ಈ ರಾಖಿಗಳನ್ನು ಕಳುಹಿಸಿದ್ದಾರೆ. 900 ರಾಖಿಗಳಲ್ಲಿ 300 ರಾಖಿಗಳನ್ನು ವಾಘಾ ಗಡಿಯಲ್ಲಿರುವ ಸೈನಿಕರಿಗೆ, 300 ಅಸ್ಸಾಂ ಗಡಿಯಲ್ಲಿರುವ ಸೈನಿಕರಿಗೆ ಮತ್ತು 300 ರಾಖಿಗಳನ್ನು ಹರಿಯಾಣದ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಕಳುಹಿಸಲಾಗಿದೆ. ಆಗಸ್ಟ್ 11 ರಂದು ಸೈನಿಕರು ರಾಖಿಗಳನ್ನು ಸ್ವೀಕರಿಸಿದರು ಎನ್ನಲಾಗಿದೆ.

ತಮ್ಮ ಕುಟುಂಬದಿಂದ ದೂರವಿದ್ದು, ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿರುವ ಯೋಧರಿಗೆ ಈ ಮಂಗಳಕರ ದಿನದಂದು ಅವರಿಗೆ ಒಳ್ಳೆಯದಾಗಲಿ ಎಂದು ರಾಖಿಗಳನ್ನು ಕಳುಹಿಸಿದ್ದೇನೆ. ಸಹೋದರತ್ವದ ಸಂಕೇತವಾಗಿ ಇದನ್ನು ಕಳುಹಿಸಿದ್ದೇನೆ. ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಸುಮಾರು 200 ಸೈನಿಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ವಿದ್ಯಾ ಹೇಳಿದ್ದಾರೆ.

Bellary girl sent 900 rakhis to Indian soldiers for raksha bandhan

ವಿದ್ಯಾಶ್ರೀ ಸೈನಿಕರಿಗೆ ರಾಖಿ ದಾರಗಳನ್ನು ಕಳುಹಿಸುತ್ತಿರುವುದು ಇದು ಎರಡನೇ ಬಾರಿ. ಕಳೆದ ವರ್ಷ ಅವರು ಸೈನಿಕರಿಗೆ 300 ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ಸೈನಿಕರು ರಾಖಿಗಳೊಂದಿಗೆ ಅವರ ಚಿತ್ರಗಳನ್ನು ಕಳುಹಿಸಿದ್ದರು. ವಿದ್ಯಾಶ್ರೀ ಕರ್ನಾಟಕ ರಾಜ್ಯ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಈಕೆ ಬಳ್ಳಾರಿಯ ಬಸವೇಶ್ವರ ನಗರದ ನಿವಾಸಿಯಾಗಿದ್ದಾರೆ.

Bellary girl sent 900 rakhis to Indian soldiers for raksha bandhan

ದೇಶಾದ್ಯಂತ ರಾಖಿ ಕಟ್ಟುವ ಹಬ್ಬ ರಕ್ಷಾ ಬಂಧನ ಆಗಸ್ಟ್‌ 11ರಂದು ಜರುಗಿದ್ದು, ಎಲ್ಲೆಡೆ ಸಹೋದರ ಸಹೋದರಿಯರು ರಾಖಿ ಕಟ್ಟುವ ಮೂಲಕ ಸಡಗರದಿಂದ ರಕ್ಷಾ ಬಂಧನ ಆಚರಣೆ ಮಾಡಿದರು. ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಉತ್ತರಪ್ರದೇಶ ಸರ್ಕಾರ ಹಾಗೂ ಹರಿಯಾಣದಲ್ಲಿ ಮಹಿಳೆಯರಿಗೆ ಹಬ್ಬದ ಉಡುಗೊರೆಯಾಗಿ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+