ರಕ್ಷಾ ಬಂಧನಕ್ಕೆ ಭಾರತೀಯ ಸೈನಿಕರಿಗೆ 900 ರಾಖಿ ಕಳುಸಿದ ಬಳ್ಳಾರಿ ಯುವತಿ
ಬಳ್ಳಾರಿ, ಆಗಸ್ಟ್ 12: ಕರ್ನಾಟಕದ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬ 23 ವರ್ಷದ ಯುವತಿ ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ 900 ರಾಖಿಗಳನ್ನು ಕಳುಹಿಸಿದ್ದಾರೆ.
ಬೆಂಗಳೂರಿನಲ್ಲಿರುವ ಸೇನಾ ಸಂಘಟನೆಯಾದ ಯೋಧ ನಮನ ಮೂಲಕ ವಿದ್ಯಾ ಈ ರಾಖಿಗಳನ್ನು ಕಳುಹಿಸಿದ್ದಾರೆ. 900 ರಾಖಿಗಳಲ್ಲಿ 300 ರಾಖಿಗಳನ್ನು ವಾಘಾ ಗಡಿಯಲ್ಲಿರುವ ಸೈನಿಕರಿಗೆ, 300 ಅಸ್ಸಾಂ ಗಡಿಯಲ್ಲಿರುವ ಸೈನಿಕರಿಗೆ ಮತ್ತು 300 ರಾಖಿಗಳನ್ನು ಹರಿಯಾಣದ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಕಳುಹಿಸಲಾಗಿದೆ. ಆಗಸ್ಟ್ 11 ರಂದು ಸೈನಿಕರು ರಾಖಿಗಳನ್ನು ಸ್ವೀಕರಿಸಿದರು ಎನ್ನಲಾಗಿದೆ.
ತಮ್ಮ ಕುಟುಂಬದಿಂದ ದೂರವಿದ್ದು, ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿರುವ ಯೋಧರಿಗೆ ಈ ಮಂಗಳಕರ ದಿನದಂದು ಅವರಿಗೆ ಒಳ್ಳೆಯದಾಗಲಿ ಎಂದು ರಾಖಿಗಳನ್ನು ಕಳುಹಿಸಿದ್ದೇನೆ. ಸಹೋದರತ್ವದ ಸಂಕೇತವಾಗಿ ಇದನ್ನು ಕಳುಹಿಸಿದ್ದೇನೆ. ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಸುಮಾರು 200 ಸೈನಿಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ವಿದ್ಯಾ ಹೇಳಿದ್ದಾರೆ.

ವಿದ್ಯಾಶ್ರೀ ಸೈನಿಕರಿಗೆ ರಾಖಿ ದಾರಗಳನ್ನು ಕಳುಹಿಸುತ್ತಿರುವುದು ಇದು ಎರಡನೇ ಬಾರಿ. ಕಳೆದ ವರ್ಷ ಅವರು ಸೈನಿಕರಿಗೆ 300 ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ಸೈನಿಕರು ರಾಖಿಗಳೊಂದಿಗೆ ಅವರ ಚಿತ್ರಗಳನ್ನು ಕಳುಹಿಸಿದ್ದರು. ವಿದ್ಯಾಶ್ರೀ ಕರ್ನಾಟಕ ರಾಜ್ಯ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಈಕೆ ಬಳ್ಳಾರಿಯ ಬಸವೇಶ್ವರ ನಗರದ ನಿವಾಸಿಯಾಗಿದ್ದಾರೆ.

ದೇಶಾದ್ಯಂತ ರಾಖಿ ಕಟ್ಟುವ ಹಬ್ಬ ರಕ್ಷಾ ಬಂಧನ ಆಗಸ್ಟ್ 11ರಂದು ಜರುಗಿದ್ದು, ಎಲ್ಲೆಡೆ ಸಹೋದರ ಸಹೋದರಿಯರು ರಾಖಿ ಕಟ್ಟುವ ಮೂಲಕ ಸಡಗರದಿಂದ ರಕ್ಷಾ ಬಂಧನ ಆಚರಣೆ ಮಾಡಿದರು. ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಉತ್ತರಪ್ರದೇಶ ಸರ್ಕಾರ ಹಾಗೂ ಹರಿಯಾಣದಲ್ಲಿ ಮಹಿಳೆಯರಿಗೆ ಹಬ್ಬದ ಉಡುಗೊರೆಯಾಗಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications