ಬಳ್ಳಾರಿ ಲೋಕಸಭಾ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿಗೆ ದೊಡ್ಡ ಸವಾಲು
ಬಳ್ಳಾರಿ, ಅಕ್ಟೋಬರ್. 06: ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಅಲ್ಪಾವಧಿ ಅವಧಿಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತ ಬಿಜೆಪಿ - ಕಾಂಗ್ರೆಸ್ ಅಭ್ಯರ್ಥಿಗಳು ಯಾರು? ಎನ್ನುವ ಯಕ್ಷಪ್ರಶ್ನೆ ಅನೇಕರನ್ನು ತೀವ್ರವಾಗಿ ಕಾಡುತ್ತಿದೆ.
ರಾಜಕೀಯ ಲೆಕ್ಕಾಚಾರಗಳ ಪ್ರಕಾರ ಬಿ. ಶ್ರೀರಾಮುಲು ರಾಜೀನಾಮೆ ನೀಡಿರುವ ಲೋಕಸಭಾ ಸ್ಥಾನಕ್ಕೆ ಬಿ. ಶ್ರೀರಾಮುಲು ಸೋದರಳಿಯ, ಕಂಪ್ಲಿಯ ಮಾಜಿ ಶಾಸಕ ಟಿ.ಎಚ್. ಸುರೇಶಬಾಬು ಅವರನ್ನು ಓಲೈಸಿ ಕಣಕ್ಕಿಳಿಸಲು ಪಕ್ಷದ ವರಿಷ್ಠರು ಎಲ್ಲಾ ಪ್ರಯತ್ನಗಳನ್ನು ನಡೆಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನೇಕರು ಸ್ಪರ್ಧೆಯಲ್ಲಿ ಇದ್ದರೂ, ಮಹಿಳಾ ಅಭ್ಯರ್ಥಿಯಾಗಿ ಕಮಲಾ ಮರಿಸ್ವಾಮಿ ಅವರು ಮುಂಚೂಣಿಯಲ್ಲಿದ್ದಾರೆ. ಆದರೆ, ಅತ್ಯಲ್ಪ ಅವಧಿ ಇರುವ ಕಾರಣ, ಉಪ ಚುನಾವಣೆಯ ಫಲಿತಾಂಶವನ್ನು ಬದಿಗೊತ್ತಿ ಸಾರ್ವತ್ರಿಕ ಚುನಾವಣೆಯಲ್ಲೂ ಸ್ಪರ್ಧಿಸಲು ಅವಕಾಶ ನೀಡುವ ವಿಶ್ವಾಸ, ಭರವಸೆ ನೀಡಿದಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಬಿ. ರಾಂಪ್ರಸಾದ್ ಅವರು ಬಿ. ಶ್ರೀರಾಮುಲು ವಿರುದ್ಧ ಎರಡು ಬಾರಿ ಬಳ್ಳಾರಿ ಗ್ರಾಮೀಣ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ತೀವ್ರ ಪೈಪೋಟಿ ನೀಡಿ, ಸೋಲನುಭವಿಸಿದ್ದರು.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಸೇರಿ, ಜಿಲ್ಲೆಯ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರನಾಯ್ಕ, ಸಂತೋಷ್ ಎಸ್. ಲಾಡ್, ಹಿರಿಯ ರಾಜಕಾರಣಿಗಾಳದ ಎನ್. ಸೂರ್ಯನಾರಾಯಣರೆಡ್ಡಿ, ಕೆ.ಸಿ. ಕೊಂಡಯ್ಯ, ರಾಜ್ಯಸಭಾ ಸದಸ್ಯ ನಾಸೀರ್ ಅಹ್ಮದ್, ಶಾಸಕರಾದ ಇ. ತುಕಾರಾಂ, ಬಿ. ನಾಗೇಂದ್ರ ಸೇರಿದಂತೆ ಅನೇಕ ರಾಜಕಾರಣಿಗಳ ಜೊತೆ ಉತ್ತಮ ಸ್ನೇಹಸಂಬಂಧ ಹೊಂದಿದ್ದು, ಟಿಕೇಟ್ ಆಕಾಂಕ್ಷಿ ಆಗಿದ್ದಾರೆ.

ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲೂ ಕೂಡ ಸ್ಪರ್ಧಾಳುಗಳ ಪೈಕಿ ಬಳ್ಳಾರಿ ಜಿಲ್ಲೆಯಿಂದ ಏಐಸಿಸಿಗೆ ಶಿಫಾರಸ್ಸು ಆಗಿರುವ ಮೂವರು ಹೆಸರುಗಳ ಪಟ್ಟಿಯಲ್ಲಿ ಬಿ. ರಾಂಪ್ರಸಾದ್ ಅವರ ಹೆಸರೂ ಸೇರಿರುವ ಹಿನ್ನಲೆಯಲ್ಲಿ ಇವರ ಸ್ಪರ್ಧೆಯನ್ನೇ ವರಿಷ್ಟರು ಅಂತಿಮಗೊಳಿಸುವ ಸಾಧ್ಯತೆಗಳಿವೆ ಎನ್ನುವುದು ಕಾಂಗ್ರೆಸ್ಸಿಗರ ಲೆಕ್ಕಾಚಾರ.
ಏನೇ ಆಗಲಿ, ಅತ್ಯಲ್ಪಾವಧಿಗಾಗಿ ನಡೆಯುತ್ತಿರುವ ಲೋಕಸಭಾ ಉಪಚುನಾವಣೆಯಲ್ಲಿ ಸಂಪನ್ಮೂಲಗಳ ಕ್ರೋಢೀಕರಣ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ದೊಡ್ಡ ಸವಾಲಾಗಿದೆ.

ದಿನೇ ದಿನೆ ಹೆಚ್ಚುತ್ತಿರುವ ಬೇಸಿಗೆಯ ಬಿಸಿಯ ಮಧ್ಯೆ, ಚುನಾವಣೆಯನ್ನು ಎದುರಿಸುವುದು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರಿಗೆ ಮೊಸರಲ್ಲಿ ಕಲ್ಲು ಹುಡುಕಿದಂತೆ ಆಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications