ಬಳ್ಳಾರಿ ಅಂತಿಮ ಫಲಿತಾಂಶ: ಎಲ್ಲಾ ದಾಖಲೆ ಮುರಿದ ವಿಎಸ್ ಉಗ್ರಪ್ಪ
ಬಳ್ಳಾರಿ, ನವೆಂಬರ್ 06: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶವು ಮಂಗಳವಾರ(ನವೆಂಬರ್ 06) ಮಧ್ಯಾಹ್ನ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು ಇದೇ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಂಸದೆ ಜೆ ಶಾಂತಾ ಅವರಿಗೆ ತೀವ್ರ ಮುಖಭಂಗವಾಗಿದೆ.
ಜನವಿರೋಧಿ, ಸರ್ವಾಧಿಕಾರಿ ಪ್ರವೃತ್ತಿ ತೋರುವವರ ವಿರುದ್ಧ ಜಾತ್ಯಾತೀತವಾದಿಗಳ ಗೆಲುವು ಇದಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಈ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ವಿಎಸ್ ಉಗ್ರಪ್ಪ ಅವರು ಘೋಷಿಸಿದ್ದಾರೆ.

ಬಳ್ಳಾರಿ ಲೋಕಸಭೆ ಉಪ ಚುನಾವಣೆ ಅಂತಿಮ ಫಲಿತಾಂಶ (ನವೆಂಬರ್ 06,2018)
ಬಳ್ಳಾರಿ ಲೋಕಸಭೆ ಚುನಾವಣೆ ಲೈವ್ ಅಪ್ಡೇಟ್: ವಿಎಸ್ ಉಗ್ರಪ್ಪಗೆ ದಾಖಲೆ ಜಯ
* ನವೆಂಬರ್ 03ರಂದು ಬಳ್ಳಾರಿ ಲೋಕಸಭಾ ಉಪ ಚುನಾವಣೆಗೆ ನಡೆದ ಮತದಾನದಲ್ಲಿ 63.85 % ರಷ್ಟು ದಾಖಲಾಗಿತ್ತು.
* ಒಟ್ಟು ಎಣಿಕೆಯಾದ ಮತಗಳು :10,34,980
* ತಿರಸ್ಕೃತಗೊಂಡ ಮತಗಳು: 226
* ನೋಟಾ : 12,413
* ವಿಎಸ್ ಉಗ್ರಪ್ಪ(ಕಾಂಗ್ರೆಸ್): 6,28,365 ಮತಗಳು
* ಜೆ ಶಾಂತಾ (ಬಿಜೆಪಿ) : 3,85,204 ಮತಗಳು
* ಗೆಲುವಿನ ಅಂತರ: 2,43,261 ಮತಗಳು
ಉಳಿದ ಪ್ರಮುಖ ಆಭ್ಯರ್ಥಿಗಳು:
* ವೈ ಪಂಪಾಪತಿ: 7,697 ಮತಗಳು
* ಡಾ. ಟಿ. ಆರ್ ಶ್ರೀನಿವಾಸ್ : 13,714ಮತಗಳು
ವಲಸಿಗರ ಗೆಲುವು: 1999ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಿ, ಬಿಜೆಪಿ ಎದುರಾಳಿ ಸುಷ್ಮಾ ಸ್ವರಾಜ್ ಅವರನ್ನು ಸೋಲಿಸಿದ್ದರು. 2004ರಲ್ಲಿ ಬಿಜೆಪಿ ಪಾಲಾದ ಬಳಿಕ ಕಾಂಗ್ರೆಸ್ಸಿಗೆ ಇಲ್ಲಿ ಗೆಲುವಿನ ನಗೆ ಬೀರಲು ಆಗಿರಲಿಲ್ಲ. 14 ವರ್ಷಗಳ ಬಳಿಕ ಉಗ್ರಪ್ಪ ಅವರು ಇತಿಹಾಸ ನಿರ್ಮಿಸಿದ್ದಾರೆ.
85,144 ಮತಗಳ ಅಂತರದಿಂದ ಗೆದ್ದಿದ್ದ ಶ್ರೀರಾಮುಲು, ಲಕ್ಷಾಂತರ ಮತಗಳಿಂದ ಗೆದ್ದಿದ್ದ ಕೂಳೂರು ಗೌಡರ ದಾಖಲೆಯನ್ನು ಉಗ್ರಪ್ಪ ಮುರಿದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications