ಭಾರಿ ಅಂತರದಿಂದ ಗೆಲುವು ನಿರೀಕ್ಷಿತ: ವಿಎಸ್ ಉಗ್ರಪ್ಪ
Recommended Video

ಬಳ್ಳಾರಿ, ನವೆಂಬರ್ 06: ನಾನು ತುಂಬಾ ವರ್ಷದಿಂದ ಸಾರ್ವಜನಿಕ ಬದುಕಿನಲ್ಲಿದ್ದೇನೆ, ಚುನಾವಣಾ ರಾಜಕೀಯ ಹೊಸದಿರಬಹುದು. ಆದರೆ, ನನಗೆ ಯಾವ ಟೆನ್ಷನ್ ಇಲ್ಲ. ನಾನು ನಿನ್ನೆ, ಮೊನ್ನೆ ರಾಜಕಾರಣಕ್ಕೆ ಬಂದಿಲ್ಲ. ಭಾರಿ ಅಂತರದಿಂದ ಗೆಲುವು ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿದ ಉಗ್ರಪ್ಪ ಅವರು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮತ್ತು ಮತದಾನದ ನಂತರ ಜನಾಭಿಪ್ರಾಯಗಳನ್ನು ನೋಡಿದರೆ ನನ್ನ ಗೆಲುವು ಸ್ಪಷ್ಟವಾಗಿ ಗೋಚರಿಸುತ್ತಿದೆ. ನಾನು ಅತ್ಯಂತ ಹೆಚ್ಚು ಬಹುಮತದಿಂದ ಈ ಚುನಾವಣೆಯಲ್ಲಿ ಆಯ್ಕೆಯಾಗುತ್ತೇನೆ. ಈ ಭರವಸೆ ನನಗೆ ಹಾಗೂ ನನ್ನ ಪಕ್ಷದ ನಾಯಕತ್ವಕ್ಕಿದೆ ಎಂದಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಮತದಾರರು ಬಹಳ ಪ್ರಬುದ್ಧರಾಗಿದ್ದಾರೆ. ಅಭ್ಯರ್ಥಿ ಹಿನ್ನೆಲೆಯನ್ನು ತಿಳಿದುಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ, ಅಭಿವೃದ್ಧಿ ದೃಷ್ಟಿ, ಸಾಮಾಜಿಕ ಕಾರ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕೊಡುಗೆಗಳೇನು ಎಂದು ಅರಿತು ಮತ ಹಾಕಿದ್ದಾರೆ ಎಂದರು.
ನವೆಂಬರ್ 03ರಂದು ಬಳ್ಳಾರಿ ಲೋಕಸಭಾ ಉಪ ಚುನಾವಣೆಗೆ ನಡೆದ ಮತದಾನದಲ್ಲಿ 63.85 % ರಷ್ಟು ದಾಖಲಾಗಿತ್ತು. ಬಳ್ಳಾರಿಯಲ್ಲಿ ಬಿಜೆಪಿ ಪ್ರಾಬಲ್ಯ ಎಂದೆನಿಸಿದರೂ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಂಡು ಬಂದಿದೆ. ಕಾಂಗ್ರೆಸ್- 50.5% ಬಿಜೆಪಿ -46.5 % ಇದೆ.
ಹೊಸ ದಾಖಲೆ ಮುರಿಯುವತ್ತ ಉಗ್ರಪ್ಪ, 85144 ಮತಗಳ ಅಂತರದಿಂದ ಗೆದ್ದಿದ್ದ ಶ್ರೀರಾಮುಲು, ಈ ಅಂತರ ದಾಟುವ ನಿರೀಕ್ಷೆಯಿದೆ. ಆರ್ವೈಎಂಇಸಿ ಕಾಲೇಜಿನಲ್ಲಿ ನಡೆದಿರ ಮತ ಎಣಿಕೆ ಕಾರ್ಯ ನಡೆದಿದ್ದು, 14 ಸುತ್ತಿನ ಮತ ಎಣಿಕೆಯಾಗಬೇಕಿದೆ. ಉಗ್ರಪ್ಪ ಅವರು ಮತ ಎಣಿಕೆ ಕೇಂದ್ರದ ಬಳಿ ಬೀಡು ಬಿಟ್ಟಿದ್ದರೆ, ಶಾಂತಾ ಅವರು ಇತ್ತ ಸುಳಿದಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications