ಬತ್ತದ ಡಿಸಿಎಂ ಕನಸು: ಸಚಿವ ಶ್ರೀರಾಮುಲು ಮಾರ್ಮಿಕ ಉತ್ತರ
ಬಳ್ಳಾರಿ, ಅ 16: ಹೊಸದಾಗಿ ಹಂಚಿಕೆಯಾಗಿರುವ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಭಾರವನ್ನು ಇನ್ನಷ್ಟೇ ವಹಿಸಿಕೊಳ್ಲಬೇಕಾಗಿರುವ ಸಚಿವ ಬಿ.ಶ್ರೀರಾಮುಲು, ಉಪಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ನಗರದಲ್ಲಿ ಮಾತನಾಡುತ್ತಿದ್ದ ಸಚಿವರು,"ಉಪಚುನಾವಣೆ ಎದುರಾಗಿದೆ, ಅದನ್ನು ಗೆಲ್ಲುವ ಸವಾಲು ನಮ್ಮ ಮುಂದಿದೆ. ಎರಡು ಕ್ಷೇತ್ರ ಗೆದ್ದ ನಂತರ, ನಮಗೆ ಇನ್ನಷ್ಟು ಶಕ್ತಿ ಬರಲಿದೆ"ಎಂದು ಹೇಳಿದರು.
"ಕಷ್ಟಪಟ್ಟು ದುಡಿಯುವವರನ್ನು ಗುರುತಿಸುವ ಪಕ್ಷವೆಂದರೆ ಅದು ಬಿಜೆಪಿ. ನಾನೂ ಮುಂದಿನ ದಿನಗಳಲ್ಲಿ ಡಿಸಿಎಂ ಆದರೂ ಆಗಬಹುದು. ಭಗವಂತ ಹೇಗೆ ಬರೆದಿರುತ್ತಾನೋ ಹಾಗೇ ಆಗುತ್ತದೆ"ಎಂದು ಸಚಿವ ಶ್ರೀರಾಮುಲು ಅಭಿಪ್ರಾಯ ಪಟ್ಟರು.

"ಆರೋಗ್ಯ ಖಾತೆ ಬದಲಾಯಿಸಿದ್ದಕ್ಕೆ ನಾನೇನೂ ಬೇಸರಗೊಂಡಿಲ್ಲ. ಈಗ ವಹಿಸಲಾಗಿರುವ ಖಾತೆಯೂ ಬಹುದೊಡ್ಡ ಸಚಿವಾಲಯವಾಗಿದೆ. ನಮ್ಮಲ್ಲಿ ಏನೂ ಗೊಂದಲವಿಲ್ಲ"ಎಂದು ಹೇಳಲು ಶ್ರೀರಾಮುಲು ಮರೆಯಲಿಲ್ಲ.
ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಹಿಂದಿನಿಂದಲೂ ಕಣ್ಣಿಟ್ಟಿದ್ದ ಶ್ರೀರಾಮುಲು, ತಮ್ಮ ಆಕಾಂಕ್ಷೆಯನ್ನು ಸಮುದಾಯದ ಪೀಠಾಧಿಪತಿಗಳು, ಗಣ್ಯರ ಮೂಲಕ ವ್ಯಕ್ತ ಪಡಿಸುತ್ತಲೇ ಇದ್ದರು. ಆದರೆ, ಇದ್ಯಾವುದೂ ಇದುವರೆಗೆ ವರ್ಕೌಟ್ ಆಗಿಲ್ಲ.
ಆರೋಗ್ಯ ಇಲಾಖೆಯನ್ನು ತನ್ನಿಂದ ಕಿತ್ತುಕೊಂಡು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಸಿಟ್ಟಾಗಿದ್ದ, ಶ್ರೀರಾಮುಲು ಸದ್ಯದ ಮಟ್ಟಿಗೆ ತಣ್ಣಗಾಗಿದ್ದಾರೆ.
ಸಿಎಂ ಕ್ರಮದ ವಿರುದ್ದ, ಒಂದು ಹಂತದಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದ ಶ್ರೀರಾಮುಲು ಶಾಂತವಾಗಿರಲು, ವರಿಷ್ಠರಿಂದ ಬಂದ ಸಂದೇಶವೇ ಕಾರಣ ಎನ್ನುವ ಮಾತು ಬಿಜೆಪಿ ಪಡಶಾಲೆಯಲ್ಲಿ ಓಡಾಡುತ್ತಿದೆ. ಇದರ ಬೆನ್ನಲ್ಲೇ, ಬಳ್ಳಾರಿಯಲ್ಲಿ ಶ್ರೀರಾಮುಲು ನೀಡಿದ ಈ ಹೇಳಿಕೆ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications