ಬಳ್ಳಾರಿ ವಿಮ್ಸ್ ದುರಂತ: ಸಚಿವ ಸುಧಾಕರ್ ವಿರುದ್ಧ ಸೋಮಶೇಖರ್ ರೆಡ್ಡಿ ಅಸಮಧಾನ
ಬಳ್ಳಾರಿ, ಸೆಪ್ಟೆಂಬರ್ 17: ಆರೋಗ್ಯ ಸಚಿವ ಸುಧಾಕರ್ ಅವರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ, ವಿಮ್ಸ್ ನಿರ್ದೇಶಕ ಸ್ಥಾನಕ್ಕೆ ಡಾ ಗಂಗಾಧರ ಗೌಡ ಆಯ್ಕೆ ಮಾಡಬೇಡಿ ಎಂದು ಸಚಿವ ಸುಧಾಕರ್ಗೆ ನಾವೆಲ್ಲ ಅನೇಕ ಬಾರಿ ಹೇಳಿದೆವು, ಆದರೂ ಸಚಿವ ಗಂಗಾಧರ ಗೌಡರನ್ನೇ ನೇಮಕ ಮಾಡಿದರು ಎಂದು ಆರೋಗ್ಯ ಸಚಿವರ ವಿರುದ್ಧ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಕೂಡ ಅಸಮಾಧಾನ ಹೊರ ಹಾಕಿದ್ದಾರೆ.
ಬಳ್ಳಾರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ವಿಮ್ಸ್ ದುರಂತಕ್ಕೆ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಗಂಗಾಧರಗೌಡರ ನಿರ್ಲಕ್ಷ್ಯವೇ ಕಾರಣ. ವಿಮ್ಸ್ ಆಸ್ಪತ್ರೆ ಬಹಳ ದೊಡ್ಡ ಆಸ್ಪತ್ರೆ, ನಿರ್ದೇಶಕರಾದವರು ಪ್ರತಿದಿನ ರೌಂಡ್ಸ್ ಹಾಕಬೇಕು, ಪ್ರತಿ ದಿನ ಐದು ಸಾವಿರ ರೋಗಿಗಳು ಬರುತ್ತಾರೆ. ಇಲ್ಲಿನ ವ್ಯವಸ್ಥೆಗಳನ್ನು ತಿಳಿದುಕೊಳ್ಳಬೇಕಿತ್ತು. ಇನ್ನು ಮುಂದಿನ ದಿನಗಳಲ್ಲಾದರೂ ಅವರು ಇದನ್ನೆಲ್ಲಾ ಅರಿತು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಗಂಗಾಧರ ಗೌಡರನ್ನು ವಿಮ್ಸ್ ನಿರ್ದೇಶಕರನ್ನು ನೇಮಕಮಾಡುವುದು ಬೇಡ, ಅವರು ಉಪನ್ಯಾಸಕರಾಗಿ ಕೆಲಸ ಮಾಡಿದವರು, ಆಡಳಿತದ ಬಗ್ಗೆ ಅನುಭವ ಇಲ್ಲ ಎಂದು ಹೇಳಿದ್ದೆವು. ಆದರೆ ಸಚಿವರು ಇವರು ಪಾರದರ್ಶಕವಾಗಿ ಕೆಲಸ ಮಾಡುತ್ತಾರೆಂದು ಹೇಳಿ ಇವರನ್ನು ನೇಮಕ ಮಾಡಿದ್ದಾರೆ. ಇವರಿಗಿಂತ ಒಳ್ಳೆಯ ವೈದ್ಯರು ಅನುಭವ ಇರುವ ವೈದ್ಯರು ಇದ್ದಾರೆ ಎಂದು ನಾವು ಮೊದಲೇ ಹೇಳಿದ್ದೆವು. ಆದರೆ, ತಮ್ಮ ಮಾತು ಕೇಳಲಿಲ್ಲ ಎಂದು ಹೇಳುವ ಮೂಲಕ ತಾವು ಸೂಚಿಸುವ ವೈದ್ಯರನ್ನು ನಿರ್ದೇಶಕರಾಗಿ ಮಾಡಿಲ್ಲ ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಘಟನೆ ನಡೆದ ನಂತರ ನಿರ್ದೇಶಕರ ಬದಲಾವಣೆ ಮಾಡಬೇಕೆಂದು ಸಿಎಂಗೆ ಮನವಿ ಮಾಡುತ್ತೇವೆ, ಅವರನ್ನು ಬದಲಾವಣೆ ಮಾಡಿದರೆ ಒಳ್ಳೆಯದು. ಒಳ್ಳೆಯ ಆಡಳಿತಗಾರರು ಅಗತ್ಯವಿದೆ. ಈ ದುರಂತಕ್ಕೆ ವಿಮ್ಸ್ ನಿರ್ದೇಶಕ ಗಂಗಾಧರ ಗೌಡ ನೇರ ಕಾರಣ ಎಂದು ಹೇಳಲಾಗಲ್ಲ, ಆದರೆ ಅವರ ನಿರ್ಲಕ್ಷ್ಯದಿಂದ ಇದೆಲ್ಲಾ ಆಗಿದೆ. ಸಿಬ್ಬಂದಿಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದರಲ್ಲಿ ಅವರು ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಸಚಿವ ಶ್ರೀರಾಮುಲು ಮತ್ತು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಮಾಡಿದ್ದರಿಂದ ಮೃತರಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನು ಸರಕಾರಿ ಪ್ರಾಯೋಜಿತ ಸಾವುಗಳು ಎಂದು ಹೇಳುವುದು ಸರಿಯಲ್ಲ, ನಿತ್ಯವು ಹಲವು ಜನರು ತೀರಿಕೊಂಡು ಹೋಗುತ್ತಾರೆ, ಅದಕ್ಕೆ ಸರಕಾರವೇ ಕಾರಣವೆಂದು ಹೇಳುವುದು ಸರಿಯಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications