ವಿವಾದಾತ್ಮಕ ಹೇಳಿಕೆ: ಉಲ್ಟಾ ಹೊಡೆದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ
ಬಳ್ಳಾರಿ, ಜನವರಿ 06: ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಹೇಳಿಕೆ ಬಗ್ಗೆ ಉಲ್ಟಾ ಹೊಡೆದಿದ್ದಾರೆ.
'ಅವರು (ಮುಸ್ಲೀಮರು) ಹತ್ತು ಮಕ್ಕಳು ಹಡೆದರೆ, ನಾವು (ಹಿಂದೂಗಳು) ಐವತ್ತು ಮಕ್ಕಳನ್ನು ಹುಟ್ಟಿಸೋಣ' ಎಂಬ ಹೇಳಿಕೆ ಸೇರಿದಂತೆ ಮುಸ್ಲೀಮರು ಮತ್ತು ವಿಪಕ್ಷಗಳ ಬಗ್ಗೆ ಬಹುವಿವಾದಾತ್ಮಕ ಹೇಳಿಕೆಯನ್ನು ಸೋಮಶೇಖರ್ ರೆಡ್ಡಿ ನೀಡಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ದೂರು ನೀಡಿದ್ದರು. ದೂರು ದಾಖಲಾಗಿ ವಿವಾದ ತಾರಕ್ಕೇರಿದ ಬಳಿಕ ಘಟನೆ ಬಗ್ಗೆ ಮಾತನಾಡಿರುವ ಸೋಮಶೇಖರ ರೆಡ್ಡಿ, 'ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ(!?)' ಎಂದಿದ್ದಾರೆ.

'ಸಿಎಎ, ಎನ್ಆರ್ಸಿ ಪರ ಕಾರ್ಯಕ್ರಮದಲ್ಲಿ ಬೇರೆ ದೇಶದ ಸಮುದಾಯದ ಬಗ್ಗೆ ನಾನು ಮಾತನಾಡಿದ್ದೆ, ಅದನ್ನು ತಪ್ಪಾಗಿ ಅರ್ಥೈಸಲಾಗಿದೆ' ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ಸಮಯದಲ್ಲಿ ಮುಸ್ಲಿಂ ನಾಯಕರು ಹಾಗೂ ಶಾಸಕ ಸೋಮಶೇಖರ ರೆಡ್ಡಿ ನಡುವೆ ಸಚಿವ ಶ್ರೀರಾಮುಲು ಸಂಧಾನ ಮಾಡುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಬಹಿರಂಗ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸೋಮಶೇಖರ ರೆಡ್ಡಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡಿದವರನ್ನು ಶೂಟ್ ಮಾಡಿ ಕೊಂದರೆ ಜನಸಂಖ್ಯೆ ಆದರೂ ಕಡಿಮೆ ಆಗುತ್ತದೆ ಎಂದಿದ್ದರು. ಜೊತೆಗೆ 'ಅವರು (ಮುಸ್ಲೀಮರು) ಹತ್ತು ಮಕ್ಕಳು ಹಡೆದರೆ, ನಾವು (ಹಿಂದೂಗಳು) ಐವತ್ತು ಮಕ್ಕಳನ್ನು ಹುಟ್ಟಿಸೋಣ' ಎಂದು ಸಹ ಹೇಳಿದ್ದರು.
ಇದೊಂದೆ ಅಲ್ಲದೆ ಹಲವು ವಿವಾದಾತ್ಮಕ ಹೇಳಿಕೆ ನೀಡಿದ್ದ ಅವರು, 'ನೀವು (ಮುಸ್ಲಿಂ) ಇರುವುದು 17% ಹಿಂದೂಗಳು 80% ಇದ್ದೇವೆ, ನಾವು ತಿರುಗಿ ಬಿದ್ದರೆ ನಿಮ್ಮ ಕತೆ ಏನಾಗಬಹುದು ಊಹಿಸಿ' ಎಂದು ಸಮುದಾಯಕ್ಕೆ ಎಚ್ಚರಿಕೆ ನೀಡುವ ದನಿಯಲ್ಲಿ ಮಾತನಾಡಿದ್ದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications