ಬಳ್ಳಾರಿ: ಅಧಿಕಾರಿಗಳ ಸಂಧಾನ, ಬಹಿಷ್ಕಾರ ಬಿಟ್ಟು ಜನರ ಮತದಾನ
ಶಿವಮೊಗ್ಗ, ಮೇ 7: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯುತ್ತಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿಯೂ ಮತದಾನ ಬೆಳಗ್ಗೆ ಆರಂಭವಾಗಿದೆ. ಆದರೆ ಕ್ಷೇತ್ರದ ಒಂದು ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಅಧಿಕಾರಿಗಳು ಜನರ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ ಮತದಾನ ಮಾಡುವುದಿಲ್ಲ ಎಂದು ಬಳ್ಳಾರಿ ತಾಲೂಕು ಕೃಷ್ಣನಗರ ಕ್ಯಾಂಪ್ನ ಜನರು ಮತದಾನ ಬಹಿಷ್ಕಾರ ಮಾಡಿದ್ದರು. ಆದ್ದರಿಂದ ವಿವಿಧ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಮನವೊಲಿಸಿದ ಬಳಿಕ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದಾರೆ.
ಅಧಿಕಾರಿಗಳ ಭೇಟಿ, ಮನವೊಲಿಕೆ ಬಳಿಕ ಮತದಾನದ ಮಹತ್ವ ಅರಿತು ಜವಾಬ್ದಾರಿಯನ್ನು ಪೂರೈಸಿದ ಎಲ್ಲ ಮತದಾರರಿಗೂ ವಂದನೆಗಳು ಎಂದು ರಾಜ್ಯ ಚುನಾವಣಾ ಆಯೋಗ ಫೇಸ್ಬುಕ್ ಪೋಸ್ಟ್ ಮೂಲಕ ಧನ್ಯವಾದಗಳನ್ನು ಸಲ್ಲಿಕೆ ಮಾಡಿದೆ.

ಬಹಿಷ್ಕಾರ ಏಕೆ?; ಬಳ್ಳಾರಿ ತಾಲೂಕು ಕೃಷ್ಣನಗರ ಕ್ಯಾಂಪ್ ಕೊಳಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ. ಕೃಷ್ಣ ನಗರ ಕ್ಯಾಂಪ್ ಅನ್ನು 2ಎ ಅಡಿಯಲ್ಲಿ ಕಂದಾಯ ಗ್ರಾಮವನ್ನಾಗಿ ಮಾಡುವುದರಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಜನರು ಮತದಾನ ಬಹಿಷ್ಕಾರ ಮಾಡಿದ್ದರು.
ಏಪ್ರಿಲ್ 23ರಂದು ಕ್ಯಾಂಪಿನ ಜನರು ಪ್ರತಿಭಟನೆಯನ್ನು ನಡೆಸಿ ಮೇ 7ರಂದು ನಡೆಯುವ ಮತದಾನವನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದ್ದರು. ಕ್ಯಾಂಪ್ನಲ್ಲಿ ಈಗಾಗಲೇ ಸಮೀಕ್ಷೆಯನ್ನು ಮಾಡಿ ಕಂದಾಯ ಗ್ರಾಮವನ್ನಾಗಿ ಮಾಡಲು ಸಿದ್ಧತೆ ನಡೆದಿದೆ ಎಂದು ಆರೋಪಿಸಿದ್ದರು.
ಗ್ರಾಮದಲ್ಲಿ ಅನೇಕ ಪಟ್ಟಾ ಜಮೀನುಗಳು ಸರ್ಕಾರಿ ಜಮೀನುಗಳಾಗಿ ಪರಿವರ್ತನೆಗೊಂಡಿದೆ. ಪಟ್ಟಾದಾರರು ರೈತಾಪಿ ವರ್ಗದವರು. ಕೃಷಿ ಜಮೀನಿನಲ್ಲಿ ಮನೆಗಳನ್ನು ಸಹ ನಿರ್ಮಾಣ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು.
ಈ ಗ್ರಾಮದಲ್ಲಿ ಅನೇಕ ಅವಿಭಕ್ತ ಕುಟುಂಬಗಳಿವೆ. ಸರ್ಕಾರ ಕಂದಾಯ ಗ್ರಾಮದ ಹೆಸರಿನಲ್ಲಿ ನಮ್ಮ ಸ್ವಂತ ಹಣದಿಂದ ಖರೀದಿ ಮಾಡಿದ ಜಮೀನನ್ನು ತನ್ನದಾಗಿಸಿಕೊಳ್ಳುತ್ತಿದೆ. ಈ ಕುರಿತು ಹಿಂದೆಯೂ ಅನೇಕ ಬಾರಿ ಮನವಿ ಸಲ್ಲಿಕೆ ಮಾಡಲಾಗಿದೆ. ಆದರೆ ಯಾವುದೇ ಅಧಿಕಾರಿಗಳು ಸ್ಪಂದಿಸಿಲ್ಲ. ಆದ್ದರಿಂದ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಜನರು ತಿಳಿಸಿದ್ದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಿಸಲಾಗಿದೆ.
"ಪ್ರತಿ ಮತವು ಅಮೂಲ್ಯವಾಗಿದ್ದು, ತಪ್ಪದೇ ಮತ ಚಲಾಯಿಸಿ" ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರೆ ನೀಡಿದ್ದಾರೆ.
ಬಳ್ಳಾರಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಈ. ತುಕಾರಾಮ್, ಬಿಜೆಪಿಯಿಂದ ಬಿ. ಶ್ರೀರಾಮುಲು ಕಣದಲ್ಲಿರುವ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು. ಮೇ 7ರಂದು ನಡೆಯುವ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
New Airports: ಬಳ್ಳಾರಿ, ವಿಜಯನಗರ, ಕೊಪ್ಪಳದ ಜನರಿಗಾಗಿ ಹೊಸ ವಿಮಾನ ನಿಲ್ದಾಣ; ಎಂಬಿ ಪಾಟೀಲ್ ಬಿಗ್ ಅಪ್ಡೇಟ್ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ











Click it and Unblock the Notifications