ಬಳ್ಳಾರಿ: ಅಧಿಕಾರಿಗಳ ಸಂಧಾನ, ಬಹಿಷ್ಕಾರ ಬಿಟ್ಟು ಜನರ ಮತದಾನ
ಶಿವಮೊಗ್ಗ, ಮೇ 7: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯುತ್ತಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿಯೂ ಮತದಾನ ಬೆಳಗ್ಗೆ ಆರಂಭವಾಗಿದೆ. ಆದರೆ ಕ್ಷೇತ್ರದ ಒಂದು ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಅಧಿಕಾರಿಗಳು ಜನರ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ ಮತದಾನ ಮಾಡುವುದಿಲ್ಲ ಎಂದು ಬಳ್ಳಾರಿ ತಾಲೂಕು ಕೃಷ್ಣನಗರ ಕ್ಯಾಂಪ್ನ ಜನರು ಮತದಾನ ಬಹಿಷ್ಕಾರ ಮಾಡಿದ್ದರು. ಆದ್ದರಿಂದ ವಿವಿಧ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಮನವೊಲಿಸಿದ ಬಳಿಕ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದಾರೆ.
ಅಧಿಕಾರಿಗಳ ಭೇಟಿ, ಮನವೊಲಿಕೆ ಬಳಿಕ ಮತದಾನದ ಮಹತ್ವ ಅರಿತು ಜವಾಬ್ದಾರಿಯನ್ನು ಪೂರೈಸಿದ ಎಲ್ಲ ಮತದಾರರಿಗೂ ವಂದನೆಗಳು ಎಂದು ರಾಜ್ಯ ಚುನಾವಣಾ ಆಯೋಗ ಫೇಸ್ಬುಕ್ ಪೋಸ್ಟ್ ಮೂಲಕ ಧನ್ಯವಾದಗಳನ್ನು ಸಲ್ಲಿಕೆ ಮಾಡಿದೆ.

ಬಹಿಷ್ಕಾರ ಏಕೆ?; ಬಳ್ಳಾರಿ ತಾಲೂಕು ಕೃಷ್ಣನಗರ ಕ್ಯಾಂಪ್ ಕೊಳಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ. ಕೃಷ್ಣ ನಗರ ಕ್ಯಾಂಪ್ ಅನ್ನು 2ಎ ಅಡಿಯಲ್ಲಿ ಕಂದಾಯ ಗ್ರಾಮವನ್ನಾಗಿ ಮಾಡುವುದರಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಜನರು ಮತದಾನ ಬಹಿಷ್ಕಾರ ಮಾಡಿದ್ದರು.
ಏಪ್ರಿಲ್ 23ರಂದು ಕ್ಯಾಂಪಿನ ಜನರು ಪ್ರತಿಭಟನೆಯನ್ನು ನಡೆಸಿ ಮೇ 7ರಂದು ನಡೆಯುವ ಮತದಾನವನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದ್ದರು. ಕ್ಯಾಂಪ್ನಲ್ಲಿ ಈಗಾಗಲೇ ಸಮೀಕ್ಷೆಯನ್ನು ಮಾಡಿ ಕಂದಾಯ ಗ್ರಾಮವನ್ನಾಗಿ ಮಾಡಲು ಸಿದ್ಧತೆ ನಡೆದಿದೆ ಎಂದು ಆರೋಪಿಸಿದ್ದರು.
ಗ್ರಾಮದಲ್ಲಿ ಅನೇಕ ಪಟ್ಟಾ ಜಮೀನುಗಳು ಸರ್ಕಾರಿ ಜಮೀನುಗಳಾಗಿ ಪರಿವರ್ತನೆಗೊಂಡಿದೆ. ಪಟ್ಟಾದಾರರು ರೈತಾಪಿ ವರ್ಗದವರು. ಕೃಷಿ ಜಮೀನಿನಲ್ಲಿ ಮನೆಗಳನ್ನು ಸಹ ನಿರ್ಮಾಣ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು.
ಈ ಗ್ರಾಮದಲ್ಲಿ ಅನೇಕ ಅವಿಭಕ್ತ ಕುಟುಂಬಗಳಿವೆ. ಸರ್ಕಾರ ಕಂದಾಯ ಗ್ರಾಮದ ಹೆಸರಿನಲ್ಲಿ ನಮ್ಮ ಸ್ವಂತ ಹಣದಿಂದ ಖರೀದಿ ಮಾಡಿದ ಜಮೀನನ್ನು ತನ್ನದಾಗಿಸಿಕೊಳ್ಳುತ್ತಿದೆ. ಈ ಕುರಿತು ಹಿಂದೆಯೂ ಅನೇಕ ಬಾರಿ ಮನವಿ ಸಲ್ಲಿಕೆ ಮಾಡಲಾಗಿದೆ. ಆದರೆ ಯಾವುದೇ ಅಧಿಕಾರಿಗಳು ಸ್ಪಂದಿಸಿಲ್ಲ. ಆದ್ದರಿಂದ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಜನರು ತಿಳಿಸಿದ್ದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಿಸಲಾಗಿದೆ.
"ಪ್ರತಿ ಮತವು ಅಮೂಲ್ಯವಾಗಿದ್ದು, ತಪ್ಪದೇ ಮತ ಚಲಾಯಿಸಿ" ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರೆ ನೀಡಿದ್ದಾರೆ.
ಬಳ್ಳಾರಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಈ. ತುಕಾರಾಮ್, ಬಿಜೆಪಿಯಿಂದ ಬಿ. ಶ್ರೀರಾಮುಲು ಕಣದಲ್ಲಿರುವ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು. ಮೇ 7ರಂದು ನಡೆಯುವ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications