ರಾಮಲಿಂಗಾ ರೆಡ್ಡಿ ಮಾಡಿರುವ ಆರೋಪವನ್ನು ಸಾಬೀತು ಮಾಡಲಿ: ಬಿಎಸ್ವೈ
ಬಳ್ಳಾರಿ, ಜನವರಿ 05: ಬಿಜೆಪಿ ಪಕ್ಷವು ಪಿಎಫ್ಐ ಜೊತೆ ಗುಪ್ತ ಸಂಬಂಧ ಹೊಂದಿದೆ ಎಂದು ಆರೋಪಿಸಿರುವ ರಾಮಲಿಂಗಾ ರೆಡ್ಡಿ ತಮ್ಮ ಆರೋಪವನ್ನು 24 ಗಂಟೆ ಒಳಗೆ ಸಾಬೀತು ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಲಿಂಗಾ ರೆಡ್ಡಿ ಅವರದ್ದು ಬೇಜವಾಬ್ದಾರಿ ಹೇಳಿಕೆ, ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಸದಸ್ಯರ ಕೈವಾಡವಿದೆ ಎಂಬ ಆರೋಪವೂ ಸುಳ್ಳು ಎಂದು ಅವರು ಹೇಳಿದರು.
ದೀಪಕ್ ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರ ನ್ಯಾಯ ದೊರಕಿಸುವುದಿಲ್ಲವೆಂದೇ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ರಾಜ್ಯದ ಸಂಸದರು ಕೇಂದ್ರವನ್ನು ಆಗ್ರಹಿಸಿದ್ದಾರೆ ಎಂದರು.

ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಅವರ ಮೇಲೆ ಹರಿಹಾಯ್ದ ಅವರು 'ಮಹಾದಾಯಿ ವಿವಾದದ ಕುರಿತು ಸಿಎಂ ಸಿದ್ದರಾಮಯ್ಯ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ. ಕುಡಿಯುವ ಸಲುವಾಗಿ ನೀರು ಕೊಡಲು ಸಿದ್ದ ಎಂಬ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಹೇಳಿಕೆಯನ್ನು ವಿರೋಧಿಸಿದ ಅಲ್ಲಿನ ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸದೇ ಸಿದ್ದರಾಮಯ್ಯ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದರು.
ವಿವಾದಗಳಿರುವ ರಾಜ್ಯದ 100 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಗೆ ಮುನ್ನ ಮರು ಸಮೀಕ್ಷೆ ನಡೆಯಲಿದೆ ಎಂದ ಅವರು ಜನವರಿ 28ರಂದು ಬೆಂಗಳೂರಿನಲ್ಲಿ ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಪ್ರಧಾನಿ ಮೋದಿ ಬರಲಿದ್ದಾರೆ. ಜ.10ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಚಿತ್ರದುರ್ಗಕ್ಕೆ ಭೇಡಿ ನೀಡಲಿದ್ದಾರೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications