ಬುಡಾ ಮಾಸ್ಟರ್ ಪ್ಲಾನ್ ವಿಸ್ತರಿಸಲು ದಮ್ಮೂರು ಶೇಖರ್ ಮನವಿ
ಬಳ್ಳಾರಿ, ಅ.30: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಶ್ರೀಧರಗಡ್ಡೆ, ಸಿರಿವಾರ, ಕಪ್ಪಗಲ್ಲು, ಬೈರದೇವನಹಳ್ಳಿ, ಚಾಗನೂರು, ಅಮರಾಪುರ, ಗೋಡೆಹಾಳ್, ತೆಗ್ಗಿನ ಬೂದಿಹಾಳ್, ಬೊಬ್ಬುಕುಂಟೆ, ಬುರನಾಯಕನಹಳ್ಳಿ, ಕೋಳೂರು, ಸೋಮಸಮುದ್ರದವರೆಗೆ ವಿಸ್ತರಿಸಬೇಕು ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾದ ಅವರು ಮಾಸ್ಟರ್ ಪ್ಲಾನ್ ರೀ ಟೆಂಡರ್ ಮಾಡುವುದು ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ರೈತರೊಂದಿಗೆ 50:50 ಅನುಪಾತದಲ್ಲಿ ಅಭಿವೃದ್ಧಿ ಪಡಿಸುತ್ತಿರುವ ನಿವೇಶನ ಯೋಜನೆಗೆ ರೈತರಿಂದ ಭೂಮಿಯನ್ನು ಪ್ರಾಧಿಕಾರಕ್ಕೆ ನೋಂದಣಿ ಮಾಡಿಕೊಳ್ಳಲು ಅನುಮತಿ ನೀಡುವ ಕುರಿತು ಹಾಗೂ ಬುಡಾ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.
ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರನ್ವಯ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರವು 1988 ರಿಂದ ಪ್ರಾರಂಭವಾಗಿ ತನ್ನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುತ್ತದೆ. ಬಳ್ಳಾರಿ-ಸಂಡೂರು ಸ್ಥಳೀಯ ಯೋಜನಾ ಪ್ರದೇಶವು ಬಳ್ಳಾರಿ ತಾಲೂಕಿನ 17 ಗ್ರಾಮಗಳು ಹಾಗೂ ಸಂಡೂರು ತಾಲೂಕಿನ 27 ಗ್ರಾಮಗಳನ್ನೊಳಗೊಂಡಿರುತ್ತದೆ.

ಹೊಸಪೇಟೆ ಸ್ಥಳೀಯ ಯೋಜನಾ ಪ್ರದೇಶವು 38 ಗ್ರಾಮಗಳನ್ನೊಳಗೊಂಡಿರುತ್ತದೆ. ವಿಜಯನಗರ ಸ್ಥಳೀಯ ಯೋಜನಾ ಪ್ರದೇಶವು ಬಳ್ಳಾರಿ ತಾಲೂಕಿನ 6 ಗ್ರಾಮ, ಹೊಸಪೇಟೆ ತಾಲೂಕಿನ 9 ಗ್ರಾಮ ಹಾಗೂ ಸಂಡೂರು ತಾಲೂಕಿನ 28 ಗ್ರಾಮ ಒಟ್ಟು 43 ಗ್ರಾಮಗಳನ್ನೊಳಗೊಂಡಿರುತ್ತದೆ. ವಿಸ್ತೀರ್ಣವು 580.70 ಚ.ಕಿ.ಮೀ. ಬಳ್ಳಾರಿ ವ್ಯಾಪ್ತಿಯ ಜಾನೆಕುಂಟೆ, ಕೊಳಗಲ್ಲು, ಬಳ್ಳಾರಿ ಕಸಬಾ, ಬಿ ಗೋನಾಳ್, ಸಂಗನಕಲ್ಲು, ಹಲಕುಂದಿ, ಬೆಳಗಲ್ಲು, ಹೊನ್ನಳ್ಳಿ, ಪತ್ರ ಬೂದಿಹಾಳ್, ಬಿಸಲಹಳ್ಳಿ, ಬೇವಿನಹಳ್ಳಿ, ಮಿಂಚೇರಿ, ಆಲದಹಳ್ಳಿ, ಮುಂಡ್ರಿಗಿ, ಆಂದ್ರಾಳ್, ಹದ್ದಿನಗುಂಡು, ಕಕ್ಕಬೇವಿನಹಳ್ಳಿ, ಸಂಜೀವರಾಯನಕೋಟೆ ಮುಂತಾದ 18 ಗ್ರಾಮಗಳು ಸೇರಿವೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications