ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾತಿ ಬಳಸಿ ಮತಯಾಚನೆ: ಸೋಮಣ್ಣ, ಮಾಧುಸ್ವಾಮಿ ವಿರುದ್ದ ದೂರು

|
Google Oneindia Kannada News

ಬಳ್ಳಾರಿ, ಡಿಸೆಂಬರ್ 04: ಉಪ ಚುನಾವಣಾ ಪ್ರಚಾರದಲ್ಲಿ ಜಾತಿ ಬಳಸಿ ಮತಯಾಚಿಸಿರುವ ಸಚಿವರಾದ ವಿ.ಸೋಮಣ್ಣ ಮತ್ತು ಜೆ.ಸಿ.ಮಾಧುಸ್ವಾಮಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ದೂರು ಕೊಟ್ಟಿದ್ದಾರೆ.

ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಸವರಾಜ ರಾಯರೆಡ್ಡಿ ಅವರು, "ವಿ.ಸೋಮಣ್ಣ ಹಾಗೂ ಜೆ.ಚಿ.ಮಾಧುಸ್ವಾಮಿ ಅವರು ಹೊಸಪೇಟೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಮತಯಾಚಿಸಿದ್ದಾರೆ, ಕೂಡಲೇ ಈ ಇಬ್ಬರು ಸಚಿವರನ್ನು ಬಂಧಿಸಿ, ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ವಿ.ಎಸ್.ಉಗ್ರಪ್ಪನನ್ನು ರೂಂನಲ್ಲಿ ಕೂಡಿ ಹಾಕಿ ಬೀಗ ಜಡಿದು ಪರಾರಿಯಾಗಿದ್ದು ಯಾರು?ವಿ.ಎಸ್.ಉಗ್ರಪ್ಪನನ್ನು ರೂಂನಲ್ಲಿ ಕೂಡಿ ಹಾಕಿ ಬೀಗ ಜಡಿದು ಪರಾರಿಯಾಗಿದ್ದು ಯಾರು?

ಸಚಿವರು ಮತ್ತು ಸಭೆಯಲ್ಲಿ ಭಾಗವಹಿಸಿದ ಎಲ್ಲರ ವಿರುದ್ಧವೂ ದೂರು ದಾಖಲಿಸಿಕೊಂಡು ಕ್ರಮಕೈಗೊಳ್ಳಬೇಕೆಂದು ಹೇಳಿದರು. "ವೀರಶೈವ-ಲಿಂಗಾಯತರು ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಹಾಕುವ ಒಂದೊಂದು ಮತವೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹಾಕಿದಂತೆ, ನೀವು ಮತ ಹಾಕದಿದ್ದರೆ ಯಡಿಯೂರಪ್ಪನವರಿಗೆ ಕಪಾಳಮೋಕ್ಷ ಮಾಡಿದಂತೆ" ಎಂದು ಹೇಳುವ ಮೂಲಕ ಜಾತಿ, ಧರ್ಮದ ಆಧಾರದ ಮೇಲೆ ಮತ ಕೇಳಿದ್ದಾರೆ ಎಂದು ಆರೋಪಿಸಿದರು.

Caste Use To Vote: Complaint against Somanna and Madhuswamy

ಯಾವುದೇ ರಾಜಕೀಯ ಪಕ್ಷಗಳು ಜಾತಿ,ಧರ್ಮದ ವಿಷಯದ ಮೇಲೆ ಮತಯಾಚಿಸುವುದು ಚುನಾವಣಾ ನೀತಿಯ ಉಲ್ಲಂಘನೆಯಾದಂತೆ, ಅಲ್ಲದೇ ಅದು ಸಮಾಜಕ್ಕೆ ಮಾಡಿದ ಅವಮಾನವಾಗಿದೆ, ಆದ್ದರಿಂದ ಕೂಡಲೇ ಈ ಇಬ್ಬರು ಸಚಿವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆಗೆ ಡೇಟ್ ಫಿಕ್ಸ್: ಆನಂದ್ ಸಿಂಗ್ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆಗೆ ಡೇಟ್ ಫಿಕ್ಸ್: ಆನಂದ್ ಸಿಂಗ್

ಇದೇ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮಾತನಾಡಿದರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನೇಕ ಸಚಿವರು ಉಪ ಚುನಾವಣೆಯಲ್ಲಿ ಗೆಲ್ಲಲು ಹೊಸಪೇಟೆ ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಾಗೂ ಚಿನ್ನದ ಆಮಿಷ ಒಡ್ಡುತ್ತಿದ್ದರೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

ಹೊಸಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಡಿಸೆಂಬರ್ 05 ರಂದು ಉಪ ಚುನಾವಣೆಯ ಮತದಾನ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟವಾಗಲಿದೆ.

English summary
Former minister Basavaraja Raiyareddy Has Lodged a Complaint To The Election Commission Seeking Appropriate Action Against Use To Caste voters Ministers V.Somanna and JC Madhuswamy, Who Have Been Using Caste In The By Election Campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X