ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವ: ಜನರ ಮನಸ್ಸು ಬದಲಾಗಲಿ, ರೈತರಿಗೆ ಕನ್ಯೆ ಕೊಡಲಿ, ವೈರಲ್
ಇತ್ತೀಚಿನ ದಿನಗಳಲ್ಲಿ ರೈತರಿಗೆ ಕನ್ಯಾ ಕೊಡಲು ಮುಂದೆ ಬರುವವರೇ ಕಡಿಮೆ ಆಗಿದ್ದು, ಇದು ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಹಾಗೆಯೇ ಚಿಮ್ಮನಹಳ್ಳಿ ನಡೆದ ದುರ್ಗಾಂಬಿಕೆ ರಥೋತ್ಸವದಲ್ಲಿ ಯುವ ರೈತನೊಬ್ಬ ಬಾಳೆಹಣ್ಣನ ಮೇಲೆ "ರೈತರಿಗೆ ಕನ್ಯೆ ಕೊಡಲಿ" ಎಂದರು
ಬಳ್ಳಾರಿ, ಫೆಬ್ರವರಿ, 02: ಇತ್ತೀಚಿನ ದಿನಗಳಲ್ಲಿ ರೈತರಿಗೆ ಕನ್ಯಾ ಕೊಡಲು ಮುಂದೆ ಬರುವವರೇ ಕಡಿಮೆ ಆಗಿದ್ದು, ಇದು ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಯುವ ರೈತನೊಬ್ಬ ಬಾಳೆಹಣ್ಣನ ಮೇಲೆ "ರೈತರಿಗೆ ಕನ್ಯೆ ಕೊಡಲಿ" ಎಂದು ಬರೆದು ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವದಲ್ಲಿ ಹರಕೆ ತೀರಿಸಿದ್ದಾನೆ.
ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವ ಬುಧವಾರ ಸಂಜೆ (ಫೆಬ್ರವರಿ 02) ಜರುಗಿದೆ. ಈ ರಥೋತ್ಸವದಲ್ಲಿ, ಓರ್ವ ಯುವ ರೈತ "ರೈತರಿಗೆ ಕನ್ಯೆ ಕೊಡಲಿ"ಎಂದು ಬಾಳೆಹಣ್ಣಿನ ಮೇಲೆ ಬರೆದು ಹರಕೆ ತೀರಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. "ಬಹುಸಂಖ್ಯಾ ಹೆಣ್ಣೆತ್ತವರ ಮನಸ್ಸು ಬದಲಾಗಲಿ, ರೈತರಿಗೆ ಕನ್ಯೆ ಕೊಡಲಿ ಎಂದು ತಾಯಿ ದುರ್ಗಾ ಮಾತೆಗೆ ನಮನ," ಎಂದು ಬಾಳೆಹಣ್ಣಿನ ಮೇಲೆ ಬರೆದಿದ್ದಾನೆ. ಇದನ್ನು ನಂತರ ರಥೋತ್ಸವದ ವೇಳೆ ದುರ್ಗಾದೇವಿ ರಥಕ್ಕೆ ಸಮರ್ಪಿಸಿ ತನ್ನ ಹರಕೆಯನ್ನು ಸಮರ್ಪಣೆ ಮಾಡಿದ್ದಾನೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಭಕ್ತರ ಕೋರಿಕೆ ಪತ್ರಗಳು ವೈರಲ್
ಇನ್ನು ದೇವರಿಗೆ ನಾನಾ ಬಗೆಯ ಕೋರಿಕೆಗಳು, ಪ್ರಾರ್ಥನೆಗಳು ಸಲ್ಲಿಸಿರುವುದು, ಬೇಡಿಕೆ ಪತ್ರಗಳನ್ನು ನೀಡುವುದು ಇತ್ತೀಚಿಗೆ ಸಾಮಾನ್ಯವಾಗಿದೆ. ಆದರೆ ಚಾಮರಾಜನಗರ ಭಕ್ತನೊಬ್ಬ ಒಂದು ಕುಟುಂಬ ಸರ್ವನಾಶ ಆಗಲೇ ಬೇಕು ಎನ್ನುವ ವಿಚಿತ್ರ ಹಾಗೂ ಆಘಾತಕಾರಿ ಬೇಡಿಕೆಯನ್ನು ಇತ್ತೀಚೆಗಷ್ಟೇ ದೇವರಿಗೆ ಸಲ್ಲಿಸಿದ್ದ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀನಾರಾಯಣ ದೇವಾಲಯದ ಹುಂಡಿ ಎಣಿಕೆಯು ಮಂಗಳವಾರ ನಡೆದಿದ್ದು, ಈ ವೇಳೆ ಭಕ್ತರ ಕೋರಿಕೆ ಪತ್ರಗಳು ಸಿಕ್ಕಿತ್ತು. ಅದರಲ್ಲಿ, ಬಳ್ಳಾರಿ ಜಿಲ್ಲೆ ನಮೂದಿಸಿರುವ ಭಕ್ತನೋರ್ವ "ಹನುಮಾರ್ ರಾಮ ನಾಯಕ ಎಂಬಾತ ಬಾಯಲ್ಲಿ ರಕ್ತ ಕಾರಿ ಬಿದ್ದು ಸಾಯಬೇಕು. ಇದನ್ನು ನೋಡಿ ನೀಲಾಬಾಯಿ ಕೊರಗಿ ಕೊರಗಿ ಸಾಯಬೇಕು, ನೀಲಗಿರಿ ನಾಯಕ, ಲೋಕೇಶಿ ನಾಯಕ, ಮುಕ್ಕಿಬಾಯಿ, ಇವರೆಲ್ಲರೂ ಕೂಡಾ ಅವರನ್ನು ನೋಡಿ ನರಳಿ ಸಾಯಬೇಕು, ಅವರುಗಳು ನಮ್ಮ ಮನೆಯ ಹತ್ತಿರವೇ ಬಾರದ ಹಾಗೆ ಮಾಡಬೇಕು, ಇವರೆಲ್ಲರೂ ಒಂದು ವರ್ಷದ ಒಳಗೆ ಸಾಯಬೇಕು ಎಂದು ಕಾಗದದಲ್ಲಿ ಬರೆದು ಹುಂಡಿಯಲ್ಲಿ ಹಾಕಿರುವುದು ಬೆಳಕಿಗೆ ಬಂದಿತ್ತು.

ಇನ್ನು ಬಳ್ಳಾರಿ ಭಕ್ತನ ಕಾಗದ ಓದಿದ ಹುಂಡಿ ಎಣಿಕೆ ಸಿಬ್ಬಂದಿ ಒಂದು ಕ್ಷಣ ದಂಗಾಗಿ ಹೋಗಿದ್ದರು. ಈ ರೀತಿ ದೇವರಿಗೆ ಸಲ್ಲಿಸುವ ಬೇಡಿಕೆ ಇರುತ್ತವೆಯೇ..? ಸಾವನ್ನು ಬಯಸುವ ಮಟ್ಟಿಗೆ ಆತ ನೊಂದಿರುವವನೇ..? ಎಂದು ಹೌಹಾರಿದ್ದರು. ಇನ್ನು ಲಕ್ಷ್ಮೀನಾರಾಯಣ ದೇವಾಲಯದ ಹುಂಡಿಯಲ್ಲಿ ಮತ್ತೊಂದು ಪತ್ರ ಸಿಕ್ಕಿತ್ತು. ಹುಂಡಿಯಲ್ಲಿ ಒಂದು ಅಂತರ ಧರ್ಮೀಯ ಪ್ರೀತಿ ಪತ್ರವೂ ಸಿಕ್ಕಿತ್ತು. ಅದರಲ್ಲಿ, ಯುವತಿಯೊಬ್ಬಳು ಶಾಹಿದ್ ಖಾನ್ ವರ್ಷಕ್ಕೆ ಒಂದು ಬಾರಿಯಾದರೂ ದಿಲ್ಲಿಯಿಂದ ಬರಬೇಕು. ನಾನು ಹಿಂದೂ ಅವನು ಮುಸ್ಲಿಂ ಆದರೆ ನಾನು ತಪ್ಪು ಮಾಡುತ್ತಿಲ್ಲ. ನನಗೆ ಅವನಿಷ್ಟ ಅವನಿಗೆ ನಾನು ಇಷ್ಟ. ನನ್ನ ಜೀವನವೇ ಅವನು, ಈ ಬೇಡಿಕೆ ಈಡೇರಿದರೆ ಪ್ರತಿ ತಿಂಗಳೊಮ್ಮೆ ನಿನ್ನ ಸನ್ನಿಧಿಗೆ ಬರುವೆ ಎಂದು ಯುವತಿ ಕಾಗದದಲ್ಲಿ ಬರೆದು ಹರಕೆ ಕಟ್ಟಿಕೊಂಡಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications