ಮೋದಿಗೆ ಧೈರ್ಯ ಬರೋದು ಅದೊಂದಕ್ಕೆ ಮಾತ್ರ: ಸಿದ್ದರಾಮಯ್ಯ ಹೇಳಿದ್ದೇನು?
ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಈ ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೆ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ ಎಂದು ನೆನೆದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. 2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ ಎಂದರು.
ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ? ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲ? ಇದನ್ನು ಪ್ರಶ್ನಿಸಬೇಕಿದೆ ಎಂದು ಹೇಳಿದರು. ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲ ಮುಗಿಸಿ ಹೋದರು ಎಂದು ಹರಿಹಾಯ್ದರು.

ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನ ರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ ಎಂದು ಕೊಂಡಾಡಿದರು.
ಕಪ್ಪು ಹಣದಿಂದಲೇ ಆಪರೇಷನ್ ಕಮಲ
ಇಂದಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದರು.

ವಕ್ಫ್ ವಿಚಾರದಲ್ಲೂ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಸ್ಥಳೀಯ ನಾಯಕರವರೆಗೂ ಎಲ್ಲರೂ ಸರಣಿ ಸುಳ್ಳು ಅಪಪ್ರಚಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ 700 ಕೋಟಿ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡಿದರು. ನಾನು ಪ್ರಧಾನಿಗೆ ಸವಾಲು ಹಾಕಿದೆ. ನಿಮ್ಮ ಆರೋಪ ಸಾಬೀತು ಮಾಡಿ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ಮಾಡಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ ಎಂದು ಲೇವಡಿ ಮಾಡಿದರು.
ಸಂಡೂರಿಗೆ 2,000 ವಸತಿ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2,000 ಮನೆಗಳನ್ನು ನೀಡುವುದಾಗಿ ಘೋಷಿಸಿದರು. ಈಗಾಗಲೇ 2,172 ಮನೆಗಳನ್ನು ಸಂಡೂರಿಗೆ ನೀಡಲಾಗಿದೆ. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಜಮೀರ್ ಘೋಷಿಸಿದರು. ಅಲ್ಲದೆ ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಿದೆ ಎಂದು ತಿಳಿಸಿದರು.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications