Get Updates
Get notified of breaking news, exclusive insights, and must-see stories!

'ಸುರೇಶಬಾಬು ಸೋಲಿಗೆ ಅವರೇ ಕಾರಣ, ಕಾಂಗ್ರೆಸ್ ಅಲ್ಲ'

ಬಳ್ಳಾರಿ, ಮೇ 15 : ಕರ್ನಾಟಕ ಇತಿಹಾಸದಲ್ಲೇ ಕಿರಿಯ ವಯಸ್ಸಿನ ಶಾಸಕ ಎಂದು ಹೆಸರು ಮಾಡಿ, ಅಂದು ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೇ ಸವಾಲು ಹಾಕಿ, ಕಾಂಗ್ರೆಸ್ ಸರ್ಕಾರ ರಚನೆಗೆ ಕಾರಣವಾಗಿದ್ದ ಕಂಪ್ಲಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಚ್. ಸುರೇಶಬಾಬು ಹ್ಯಾಟ್ರಿಕ್ ಅವಕಾಶ ತಪ್ಪಿಸಿಕೊಂಡಿದ್ದಾರೆ.

2008 ರಲ್ಲಿ, 2013 ರಲ್ಲಿ ಅಭೂತಪೂರ್ವವಾಗಿ ಗೆಲುವು ಸಾಧಿಸಿ, ಎದುರಾಳಿಗಳನ್ನು ಧೂಳೀಪಟ ಮಾಡಿದ್ದ ಟಿ.ಎಚ್. ಸುರೇಶಬಾಬು ಅವರು, ಎದುರಾಳಿಗಳನ್ನು ತೀರ ನಿರ್ಲಕ್ಷಿಸಿ, ಬೇಜವಾಬ್ದಾರಿ ತೋರುವವರು.

ಎರಡು ಅವಧಿಯಲ್ಲಿಯೂ ಶಾಸಕರಾಗಿ ಇವರು ಕ್ಷೇತ್ರದ ಅಭಿವೃದ್ಧಿಗೆ ಗಮನ ನೀಡಿದ್ದಕ್ಕಿಂತಲೂ ಚಿತ್ರನಟನ ರೀತಿಯಲ್ಲಿ ವೇಷಭೂಷಣ ಮಾಡಿಕೊಂಡು, ಯವಶಕ್ತಿಯನ್ನು ಸೆಳೆದು, ಕಡೆಗಣಿಸಿ, ನಾಟಕೀಯವಾಗಿ ವ್ಯವಹರಿಸುವಲ್ಲಿ ಖ್ಯಾತಿ ಪಡೆದಿದ್ದರು.

Congress is not responsible for Suresh Babus defeat.

ಅಲ್ಲದೇ, ಕ್ಷೇತ್ರದ ಆಗುಹೋಗುಗಳ ಬಗ್ಗೆ ಗಮನ ನೀಡದೇ ವೇದಿಕೆಗಳಲ್ಲಿ ಸಭ್ಯತೆ ಪಾಲಿಸದೇ ಅನೇಕರಲ್ಲಿ ಬೇಸರ ಮೂಡಿಸಿದ್ದರು. ಇದೇ ಅವರಿಗೆ ಸೋಲಿಗೆ ಕಾರಣ ಎಂದು ಬಿಜೆಪಿ ಮುಖಂಡರುಗಳೇ ಹೇಳುತ್ತಿದ್ದಾರೆ.

ಟಿ.ಎಚ್. ಸುರೇಶಬಾಬು ಅವರ ಸೋಲಿಗೆ ಅವರೇ ಕಾರಣ, ಕಾಂಗ್ರೆಸ್ ಅಲ್ಲ, ಕಾಂಗ್ರೆಸ್ ಅಭ್ಯರ್ಥಿಯೂ ಅಲ್ಲ ಎನ್ನುವುದು ಕಾಂಗ್ರೆಸ್ಸಿಗರ ಅಭಿಪ್ರಾಯವಾಗಿದೆ. ಟಿ.ಎಚ್. ಸುರೇಶಬಾಬು ಅವರ ಎದುರಾಳಿ ಕಾಂಗ್ರೆಸ್ ನ ಜೆ.ಎನ್. ಗಣೇಶ್ ಅವರು 80,590 ಮತಗಳನ್ನು ಪಡೆದು, ಬಿಜೆಪಿಯ ಸುರೇಶಬಾಬು 75037 ಮಗಳನ್ನು ಪಡೆದಿದ್ದಾರೆ.

ಜೆ.ಎನ್. ಗಣೇಶ್ ಅವರ ಗೆಲುವಿನ ಅಂತರ 5,555.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+