'ಸುರೇಶಬಾಬು ಸೋಲಿಗೆ ಅವರೇ ಕಾರಣ, ಕಾಂಗ್ರೆಸ್ ಅಲ್ಲ'
ಬಳ್ಳಾರಿ, ಮೇ 15 : ಕರ್ನಾಟಕ ಇತಿಹಾಸದಲ್ಲೇ ಕಿರಿಯ ವಯಸ್ಸಿನ ಶಾಸಕ ಎಂದು ಹೆಸರು ಮಾಡಿ, ಅಂದು ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೇ ಸವಾಲು ಹಾಕಿ, ಕಾಂಗ್ರೆಸ್ ಸರ್ಕಾರ ರಚನೆಗೆ ಕಾರಣವಾಗಿದ್ದ ಕಂಪ್ಲಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಚ್. ಸುರೇಶಬಾಬು ಹ್ಯಾಟ್ರಿಕ್ ಅವಕಾಶ ತಪ್ಪಿಸಿಕೊಂಡಿದ್ದಾರೆ.
2008 ರಲ್ಲಿ, 2013 ರಲ್ಲಿ ಅಭೂತಪೂರ್ವವಾಗಿ ಗೆಲುವು ಸಾಧಿಸಿ, ಎದುರಾಳಿಗಳನ್ನು ಧೂಳೀಪಟ ಮಾಡಿದ್ದ ಟಿ.ಎಚ್. ಸುರೇಶಬಾಬು ಅವರು, ಎದುರಾಳಿಗಳನ್ನು ತೀರ ನಿರ್ಲಕ್ಷಿಸಿ, ಬೇಜವಾಬ್ದಾರಿ ತೋರುವವರು.
ಎರಡು ಅವಧಿಯಲ್ಲಿಯೂ ಶಾಸಕರಾಗಿ ಇವರು ಕ್ಷೇತ್ರದ ಅಭಿವೃದ್ಧಿಗೆ ಗಮನ ನೀಡಿದ್ದಕ್ಕಿಂತಲೂ ಚಿತ್ರನಟನ ರೀತಿಯಲ್ಲಿ ವೇಷಭೂಷಣ ಮಾಡಿಕೊಂಡು, ಯವಶಕ್ತಿಯನ್ನು ಸೆಳೆದು, ಕಡೆಗಣಿಸಿ, ನಾಟಕೀಯವಾಗಿ ವ್ಯವಹರಿಸುವಲ್ಲಿ ಖ್ಯಾತಿ ಪಡೆದಿದ್ದರು.

ಅಲ್ಲದೇ, ಕ್ಷೇತ್ರದ ಆಗುಹೋಗುಗಳ ಬಗ್ಗೆ ಗಮನ ನೀಡದೇ ವೇದಿಕೆಗಳಲ್ಲಿ ಸಭ್ಯತೆ ಪಾಲಿಸದೇ ಅನೇಕರಲ್ಲಿ ಬೇಸರ ಮೂಡಿಸಿದ್ದರು. ಇದೇ ಅವರಿಗೆ ಸೋಲಿಗೆ ಕಾರಣ ಎಂದು ಬಿಜೆಪಿ ಮುಖಂಡರುಗಳೇ ಹೇಳುತ್ತಿದ್ದಾರೆ.
ಟಿ.ಎಚ್. ಸುರೇಶಬಾಬು ಅವರ ಸೋಲಿಗೆ ಅವರೇ ಕಾರಣ, ಕಾಂಗ್ರೆಸ್ ಅಲ್ಲ, ಕಾಂಗ್ರೆಸ್ ಅಭ್ಯರ್ಥಿಯೂ ಅಲ್ಲ ಎನ್ನುವುದು ಕಾಂಗ್ರೆಸ್ಸಿಗರ ಅಭಿಪ್ರಾಯವಾಗಿದೆ. ಟಿ.ಎಚ್. ಸುರೇಶಬಾಬು ಅವರ ಎದುರಾಳಿ ಕಾಂಗ್ರೆಸ್ ನ ಜೆ.ಎನ್. ಗಣೇಶ್ ಅವರು 80,590 ಮತಗಳನ್ನು ಪಡೆದು, ಬಿಜೆಪಿಯ ಸುರೇಶಬಾಬು 75037 ಮಗಳನ್ನು ಪಡೆದಿದ್ದಾರೆ.
ಜೆ.ಎನ್. ಗಣೇಶ್ ಅವರ ಗೆಲುವಿನ ಅಂತರ 5,555.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications