ಬಳ್ಳಾರಿ ರಾಜಕೀಯ; ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿಗೆ?
ಬಳ್ಳಾರಿ, ಸೆಪ್ಟೆಂಬರ್ 27 : ಬಳ್ಳಾರಿ ರಾಜಕೀಯದಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕ, ಮಾಜಿ ಶಾಸಕರೊಬ್ಬರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಈ ಕುರಿತು ಮಾತುಕತೆಯೂ ಆರಂಭವಾಗಿದೆ.
ಹೌದು, ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿಯತ್ತ ಮುಖ ಮಾಡಿದ್ದಾರೆ. 2018ರ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಪಕ್ಷದ ವೇದಿಕೆಯಲ್ಲಿ ಅವರು ಅಷ್ಟಾಗಿ ಕಾಣಿಸಿಕೊಂಡಿಲ್ಲ. ಈಗ ಅವರು ಪಕ್ಷ ತೊರೆಯಲು ಮುಂದಾಗಿದ್ದಾರೆ?.
ಅನಿಲ್ ಲಾಡ್ ತಮ್ಮ ಆಪ್ತರಿಗೆ, ಕಾರ್ಯಕರ್ತರಿಗೆ ಈಗಾಗಲೇ ಬಿಜೆಪಿ ಸೇರುವ ಕುರಿತು ಅಭಿಪ್ರಾಯ ತಿಳಿಸುವಂತೆ ಸಂದೇಶ ಕಳಿಸಿದ್ದಾರೆ. ಮೊಳಕಾಲ್ಮೂರು ಸಂಸದ ಮತ್ತು ಸಚಿವ ಬಿ. ಶ್ರೀರಾಮುಲು ಜೊತೆ ಈ ಕುರಿತು ಅನಿಲ್ ಲಾಡ್ ಮಾತುಕತೆ ನಡೆಸಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಲು ಅನಿಲ್ ಲಾಡ್ ಪ್ರಯತ್ನ ನಡೆಸುತ್ತಿದ್ದಾರೆ. ಯಡಿಯೂರಪ್ಪ ಒಪ್ಪಿಗೆ ಪಡೆದ ಬಳಿಕ ಬಿಜೆಪಿ ಸೇರುವ ಕುರಿತು ಅವರು ಅಧಿಕೃತ ಘೋಷಣೆ ಮಾಡುವ ನಿರೀಕ್ಷೆ ಇದೆ.
ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರ್ಪಡೆಗೆ ನಿರ್ಧಾರ.. ಸಚಿವ ಶ್ರೀರಾಮುಲು ಜತೆ ಈಗಾಗಲೇ ಮಾತುಕತೆ ನಡೆಸಿರುವ ಅನಿಲ್ ಲಾಡ್. ಶೀಘ್ರದಲ್ಲೇ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ನಿರೀಕ್ಷೆ ಇದೆ.

ಬಿಜೆಪಿ ಸೇರಬೇಕು ಎಂದು ಕೊಂಡಿದ್ದೇವೆ
ಮಾಧ್ಯಮಗಳ ಜೊತೆ ಮಾತನಾಡಿದ ಅನಿಲ್ ಲಾಡ್, "ಬಿಜೆಪಿ ಸೇರಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಆದರೆ, ಯಾರಿಗೂ ಹೇಳದೆ ಬೆನ್ನಿಗೆ ಚೂರಿ ಹಾಕಿ ಹೋಗುವುದಿಲ್ಲ. ಕಾರ್ಯಕರ್ತರ ಜೊತೆ ಮಾತನಾಡಿಯೇ ಹೋಗುವೆ" ಎಂದು ಹೇಳಿದರು.

ಅಭಿಪ್ರಾಯವನ್ನು ತಿಳಿಸಿ
ಅನಿಲ್ ಲಾಡ್ ಕಾರ್ಯಕರ್ತರು, ಅಭಿಮಾನಿಗಳು, ಆಪ್ತರಿಗೆ ಸಂದೇಶಗಳನ್ನು ಕಳಿಸಿದ್ದು ಬಿಜೆಪಿ ಸೇರುವ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಮನವಿ ಮಾಡಿದ್ದಾರೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಜೊತೆಗೂ ಅವರು ಮಾತುಕತೆ ನಡೆಸಿದ್ದಾರೆ. ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡುವ ನಿರೀಕ್ಷೆ ಇದೆ.

ಸಿದ್ದರಾಮಯ್ಯಗೆ ತಿಳಿಸಿದ್ದೇನೆ
"ನಾನು ಬಿಜೆಪಿ ಸೇರುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ತಿಳಿಸಿದ್ದೇನೆ. ರಾಹುಲ್ ಮತ್ತು ಸೋನಿಯಾ ಗಾಂಧಿಯನ್ನು ಭೇಟಿ ಮಾಡುತ್ತೇನೆ. ನನಗೇನು ಪಕ್ಷದ ಬಗ್ಗೆ ಅಸಮಾಧಾನವಿಲ್ಲ" ಎಂದು ಅನಿಲ್ ಲಾಡ್ ಸ್ಪಷ್ಟಪಡಿಸಿದರು.

ಬೇಷರತ್ತಾಗಿ ಸೇರುತ್ತಿದ್ದೇನೆ
"ನನಗೆ ಬಿಜೆಪಿ ಸೇರಿದ ತಕ್ಷಣ ಸ್ಥಾನಮಾನ ಸಿಗಲಿದೆ ಎಂಬ ನಿರೀಕ್ಷೆ ಇಲ್ಲ. ಸಾಮಾನ್ಯ ಕಾರ್ಯಕರ್ತನಾಗಿ, ಪಕ್ಷ ಸಂಘಟನೆ ಮಾಡಲು ಬಿಜೆಪಿ ಸೇರುತ್ತಿದ್ದೇನೆ. ಯಾವುದೇ ಷರತ್ತನ್ನು ನಾನು ಹಾಕುವುದಿಲ್ಲ. ಬೇಷರತ್ತಾಗಿ ಪಕ್ಷ ಸೇರಲಿದ್ದೇನೆ" ಎಂದು ಅನಿಲ್ ಲಾಡ್ ಹೇಳಿದರು.

2018ರ ಚುನಾವಣೆ ಸೋಲು
2018ರ ವಿಧಾನಸಭೆ ಚುನಾವಣೆಯಲ್ಲಿ ಅನಿಲ್ ಲಾಡ್ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. 60,434 ಮತಗಳನ್ನು ಪಡೆದಿದ್ದ ಅವರು 76,589 ಮತಗಳನ್ನು ಪಡೆದಿದ್ದ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಸೋಲು ಕಂಡಿದ್ದರು.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications