ಕೊರೊನಾ ಸೋಂಕು ಹೆಚ್ಚಳ: ಹಂಪಿಯ ಸ್ಮಾರಕಗಳು ಮತ್ತು ಮ್ಯೂಸಿಯಂಗಳ ಪ್ರವೇಶಕ್ಕೆ ನಿಷೇಧ
ವಿಜಯನಗರ, ಏಪ್ರಿಲ್ 16: ದೇಶಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಪ್ರಸಿದ್ಧ ತಾಜ್ ಮಹಲ್ ಸೇರಿದಂತೆ ದೇಶದ ಇತರೆ ಪ್ರವಾಸಿ ತಾಣಗಳು 1 ತಿಂಗಳು ಮಚ್ಚಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶ ಹೊರಡಿಸಿದೆ.
ಅದೇ ರೀತಿ ಕರ್ನಾಟಕದ ಹಂಪಿ ಸ್ಮಾರಕಗಳು ಮತ್ತು ಮ್ಯೂಸಿಯಂಗಳ ಪ್ರವೇಶವನ್ನು ಇಂದಿನಿಂದಲೇ ಪ್ರವಾಸಿಗರ ನಿರ್ಬಂಧಕ್ಕೆ ಆದೇಶ ನೀಡಲಾಗಿದೆ.
ಇಡೀ ದೇಶಾದ್ಯಂತ ಕೊರೊನಾ ಎರಡನೇ ಅಲೆ ಶುರುವಾದ ಹಿನ್ನೆಲೆ ಐತಿಹಾಸಿಕ ಹಂಪಿ ಸೇರಿದಂತೆ ದೇಶದ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್ಗೆ ಆದೇಶಿಸಲಾಗಿದೆ.

ಮುಂದಿನ ತಿಂಗಳು ಮೇ 15 ವರೆಗೆ ಹಂಪಿಯ ಸ್ಮಾರಕಗಳ ವೀಕ್ಷಣೆಯನ್ನು ಬಂದ್ ಮಾಡಲು ನಿರ್ಧಾರ ಮಾಡಲಾಗಿದ್ದು ಭಾರತೀಯ ಪುರಾತತ್ವ ಇಲಾಖೆ ಸ್ಮಾರಕಗಳ ನಿರ್ದೇಶಕ ಎನ್.ಕೆ ಪಾಠಕ್ರವರು ಆದೇಶ ಹೊರಡಿಸಿದ್ದಾರೆ.

ಹಂಪಿಯ ವಿಜಯ ವಿಠಲ್ ದೇವಸ್ಥಾನ, ಕಮಲ ಮಹಲ್, ಮತ್ತು ಕಮಲಾಪುರದಲ್ಲಿನ ಮ್ಯೂಸಿಯಂ ಬರುವ ಮೇ 15 ರವರೆಗೆ ವೀಕ್ಷಣೆ ಬಂದ್ ಆಗಲಿದ್ದು, ಹಂಪಿಯ ವಿರೂಪಾಕ್ಷ ದೇವರಿಗೆ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಗಳು ಎಂದಿನಂತೆ ಸರಳವಾಗಿ ನಡೆಯಲಿವೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications