ಕೊರೊನಾ ಸೋಂಕು ಹೆಚ್ಚಳ: ಹಂಪಿಯ ಸ್ಮಾರಕಗಳು ಮತ್ತು ಮ್ಯೂಸಿಯಂಗಳ ಪ್ರವೇಶಕ್ಕೆ ನಿಷೇಧ
ವಿಜಯನಗರ, ಏಪ್ರಿಲ್ 16: ದೇಶಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಪ್ರಸಿದ್ಧ ತಾಜ್ ಮಹಲ್ ಸೇರಿದಂತೆ ದೇಶದ ಇತರೆ ಪ್ರವಾಸಿ ತಾಣಗಳು 1 ತಿಂಗಳು ಮಚ್ಚಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶ ಹೊರಡಿಸಿದೆ.
ಅದೇ ರೀತಿ ಕರ್ನಾಟಕದ ಹಂಪಿ ಸ್ಮಾರಕಗಳು ಮತ್ತು ಮ್ಯೂಸಿಯಂಗಳ ಪ್ರವೇಶವನ್ನು ಇಂದಿನಿಂದಲೇ ಪ್ರವಾಸಿಗರ ನಿರ್ಬಂಧಕ್ಕೆ ಆದೇಶ ನೀಡಲಾಗಿದೆ.
ಕೊರೊನಾ ಸೋಂಕು: ಮೇ 15ರವರೆಗೆ ರಾಷ್ಟ್ರೀಯ ಸ್ಮಾರಕಗಳು ಹಾಗೂ ಮ್ಯೂಸಿಯಂಗಳು ಬಂದ್
ಇಡೀ ದೇಶಾದ್ಯಂತ ಕೊರೊನಾ ಎರಡನೇ ಅಲೆ ಶುರುವಾದ ಹಿನ್ನೆಲೆ ಐತಿಹಾಸಿಕ ಹಂಪಿ ಸೇರಿದಂತೆ ದೇಶದ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್ಗೆ ಆದೇಶಿಸಲಾಗಿದೆ.
ಮುಂದಿನ ತಿಂಗಳು ಮೇ 15 ವರೆಗೆ ಹಂಪಿಯ ಸ್ಮಾರಕಗಳ ವೀಕ್ಷಣೆಯನ್ನು ಬಂದ್ ಮಾಡಲು ನಿರ್ಧಾರ ಮಾಡಲಾಗಿದ್ದು ಭಾರತೀಯ ಪುರಾತತ್ವ ಇಲಾಖೆ ಸ್ಮಾರಕಗಳ ನಿರ್ದೇಶಕ ಎನ್.ಕೆ ಪಾಠಕ್ರವರು ಆದೇಶ ಹೊರಡಿಸಿದ್ದಾರೆ.
ಹಂಪಿಯ ವಿಜಯ ವಿಠಲ್ ದೇವಸ್ಥಾನ, ಕಮಲ ಮಹಲ್, ಮತ್ತು ಕಮಲಾಪುರದಲ್ಲಿನ ಮ್ಯೂಸಿಯಂ ಬರುವ ಮೇ 15 ರವರೆಗೆ ವೀಕ್ಷಣೆ ಬಂದ್ ಆಗಲಿದ್ದು, ಹಂಪಿಯ ವಿರೂಪಾಕ್ಷ ದೇವರಿಗೆ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಗಳು ಎಂದಿನಂತೆ ಸರಳವಾಗಿ ನಡೆಯಲಿವೆ.