ಉಡುಪಿ ಗೋ ವ್ಯಾಪಾರಿ ಕೊಲೆ ಆರೋಪಿಗಳ ಬಂಧಿಸಿದ ಬಳ್ಳಾರಿ ಪೊಲೀಸರು
ಬಳ್ಳಾರಿ, ಜೂನ್ 01: ಗೋ ವ್ಯಾಪಾರಿ ಹಸೈನ್ ಅಲಿಯಾ ಹಸನಬ್ಬ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರನ್ನು ಬಳ್ಳಾರಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ನಂತರ ಉಡುಪಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತರನ್ನು ಸೂರಿ, ಪ್ರಸಾದ್ ಮತ್ತು ದೀಪಕ್ ಎಂದು ಗುರುತಿಸಿದ್ದು ಮತ್ತೋರ್ವ ಆರೋಪಿ ಪರಾರಿ ಆಗಿದ್ದಾನೆ ಆರೋಪಿಗಳು ಎಲ್ಲರೂ ಉಡುಪಿ ಜಿಲ್ಲೆಯ ಪೆರ್ಡೂರ್ ಎಂಬಲ್ಲಿ ಮೇ 29 ರಂದು ನಡೆದ ಗೋ ವ್ಯಾಪಾರಿ ಹಸೈನ್ ಅಲಿಯಾ ಹಸನಬ್ಬ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದರು.

ಬಳ್ಳಾರಿಯ ಹೋಟಲ್ನಲ್ಲಿ ಹಸೈನ್ ಕೊಲೆ ಆರೋಪಿಗಳು ತಂಗಿರುವ ಮಾಹಿತಿಯನ್ನು ಪಡೆದ ಉಡುಪಿ ಪೊಲೀಸರು, ಬಳ್ಳಾರಿ ಪೊಲೀಸರಿಗೆ ಮಾಹಿತಿ ನೀಡಿ, ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲು ಕೋರಿದರು.
ಉಡುಪಿ ಪೊಲೀಸರ ಮಾಹಿತಿಯಿಂದ ತಕ್ಷಣವೇ ಕಾರ್ಯಪ್ರವೃತ್ತರಾದ ಬಳ್ಳಾರಿ ಪೊಲೀಸರು ಮೂರು ತಂಡಗಳಲ್ಲಿ ಕಾರ್ಯಾಚರಣೆ ನಡೆಸಿ, ನಗರದ ಹೃದಯಭಾಗದಲ್ಲಿ ಇರುವ ಹೋಟೆಲ್ನಲ್ಲಿ ತಂಗಿರುವ ಮಾಹಿತಿಯನ್ನು ಖಚಿತಪಡಿಸಿಕೊಂಡರು. ಗುರುವಾರ ರಾತ್ರಿ ಹೊಟೆಲ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಓರ್ವ ಪರಾರಿ ಆಗಿದ್ದಾನೆ. ಬಳ್ಳಾರಿ ಪೊಲೀಸರು ವಿಚಾರಣೆ ಮಾಡಿದಾಗ, ಆರೋಪಿಗಳು ಹಸೈನ್ ಅಲಿಯಾ ಹಸನಬ್ಬ ಕೊಲೆ ಪ್ರಕರಣದ ಮಾಹಿತಿ ನೀಡಿದ್ದಾರೆ, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿರುವ ಸ್ಥಳದ ಮಾಹಿತಿಯನ್ನೂ ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿ ಪೊಲೀಸರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು, ವಿಚಾರಣೆ ಮುಂದುವರೆಸಿದ್ದಾರೆ. ಮಂಗಳೂರಿನ ಜೋಕಟ್ಟೆ ನಿವಾಸಿ 65 ವರ್ಷದ ಹಸನಬ್ಬ ಅಲಿಯಾ ಹಸೈನ್ ಕಳೆದ 35 ವರ್ಷಗಳಿಂದ ಗೋ ಮಾರಾಟ ಮತ್ತು ಸಾಗಾಣಿಕೆ ವ್ಯವಹಾರ ಮಾಡುತ್ತಿದ್ದು, ಮೇ 29 ರಂದು ಕೊಲೆ ಆಗಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications