ಜಿಂದಾಲ್ಗೆ ಭೂಮಿ ಪರಭಾರೆ: ಸಚಿವ ಆನಂದ ಸಿಂಗ್ ರಾಜೀನಾಮೆ ನೀಡಲಿ
ವಿಜಯನಗರ, ಮೇ 4: ಜಿಂದಾಲ್ ಕಾರ್ಖಾನೆಗೆ 3667 ಎಕರೆ ಭೂಮಿ ಪರಭಾರೆ ಮಾಡಿದ್ದಕ್ಕೆ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಬೇಕೆಂದು ಸಿಪಿಐಎಂ ಕಾರ್ಯಕರ್ತರು ಆಗ್ರಹಿಸಿದರು.
ಅವರು ಮಂಗಳವಾರ ಹೊಸಪೇಟೆ ನಗರದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಹಶೀಲ್ದಾರರಿಗೆ ಸಚಿವ ಆನಂದಸಿಂಗ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮನವಿ ಪತ್ರ ನೀಡಿ ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ಜಂಬಯ್ಯ ನಾಯಕ ಮಾತನಾಡಿದರು.
ಕಳೆದ ಸಮ್ಮಿಶ್ರ ಸರಕಾರದಲ್ಲಿ ಜಿಂದಾಲ್ ಕಾರ್ಖಾನೆಗೆ 3667 ಎಕರೆ ಭೂಮಿ ಪರಭಾರೆ ಮಾಡುವುದಕ್ಕೆ ಅಂದು ವಿರೋಧಿಸಿ ರಾಜೀನಾಮೆ ಸಲ್ಲಿಸಿದ್ದರು, ಈಗ ತಾವೇ ಸಚಿವರಿದ್ದುಕೊಂಡು ಸಂಪುಟ ಸಭೆಯಲ್ಲಿ ಭೂಮಿ ಪಾರಭಾರೆ ಒಪ್ಪಿಗೆ ನೀಡಿದರೂ ಯಾಕೆ ಮೌನವಹಿಸಿದ್ದಾರೆ? ಅಂದು ರಾಜೀನಾಮೆ ಕೊಟ್ಟವರು ಇಂದು ಯಾಕೆ ರಾಜೀನಾಮೆ ಕೊಡುತ್ತಿಲ್ಲವೆಂದು ಹೊಸಪೇಟೆಯಲ್ಲಿ ಸಿಪಿಐಎಂ ಪಕ್ಷದ ಬಳ್ಳಾರಿ ಜಿಲ್ಲಾ ಸಮಿತಿ ಪ್ರಶ್ನೆ ಮಾಡಿದೆ.

ಅಂದು ಸಮ್ಮಿಶ್ರ ಸರ್ಕಾರದಲ್ಲಿ ಭೂಮಿ ಉಳಿವಿವಾಗಿ ರಾಜೀನಾಮೆ ನೀಡಿದವರು, ಈಗ ಭೂಮಿ ಪರಾಭಾರೆಯಾದ್ರೂ ಯಾಕೆ ಸುಮ್ಮನಿದ್ದಿರಿ-? ಸಚಿವ ಸಂಪುಟದ ಸಭೆಯಲ್ಲಿ ಭಾಗವಹಿಸಿರಲಿಲ್ಲ ಅಜೆಂಡಾ ನೋಡಿರಲಿಲ್ಲ ಎಂದು ಕುಂಟ ನೆಪಗಳನ್ನು ಹೇಳುತ್ತಿದ್ದೀರಿ. ಈ ಕೂಡಲೇ ಸುಳ್ಳು ಹೇಳುವುದನ್ನು ಬಿಟ್ಟು ರಾಜೀನಾಮೆಗೆ ಆಗ್ರಹಿಸಿದರು.
ಆನಂದ್ ಸಿಂಗ್ ಮತ್ತು ಅನಿಲ್ ಲಾಡ್ ಇಬ್ಬರೂ ಜೊತೆಗೂಡಿ ಹೋರಾಟ ಮಾಡಿದ್ದರು, ಆದರೆ ಸದ್ಯ ಈಗ ಕ್ಯಾಬಿನೆಟ್ ನಲ್ಲಿದ್ರೂ, ಏನೂ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು.

ಆನಂದ್ ಸಿಂಗ್ ಅವರು ಈ ಮೌನಕ್ಕೆ ಕಾರಣವೇನು ಎಂದ ಅವರು, ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಅಂದು ಜಿಂದಾಲ್ನ್ನು ಕಂಪನಿಯನ್ನು ಈಸ್ಟ್ ಇಂಡಿಯಾ ಕಂಪನಿ ಎಂದವರು ಇಂದು ಸುಮ್ಮನಿರುವುದು ಏಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆರ್.ಎಸ್ ಬಸವರಾಜ, ಎಂ.ಜಂಬಯ್ಯನಾಯಕ, ಆರ್.ಭಾಸ್ಕರ್ ರೆಡ್ಡಿ, ಎಂ.ಗೋಪಾಲ ಮತ್ತು ಎ.ಕರುಣಾನಿಧಿ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications