ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.30ರವರೆಗೆ ಕೊರೊನಾ ಕರ್ಫ್ಯೂ ಜಾರಿ
ವಿಜಯನಗರ, ಏಪ್ರಿಲ್ 19: ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ "ಕೊರೊನಾ ಕರ್ಫ್ಯೂ' ಅನ್ನು ಜಾರಿಗೊಳಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ವಿಜಯನಗರ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಈ ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು, ಉಳಿದಂತೆ ಎಲ್ಲಾ ಸೇವೆಗಳನ್ನು/ಸಂಚಾರಗಳನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು/ ಕಂಪನಿಗಳು/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದರೆ ಸಂಬಂಧಿಸಿದ ಕಾರ್ಮಿಕರು/ ನೌಕರರು, "ಕೊರೊನಾ ಕರ್ಫ್ಯೂ" ಅವಧಿಗೆ ಮುನ್ನವೇ ಕರ್ತವ್ಯಕ್ಕೆ ಹಾಜರಿರತಕ್ಕದ್ದು. ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟೆಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.
ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ಸರಕು ಸಾಗಾಣೀಕೆ ಮಾಡುವ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications