ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.30ರವರೆಗೆ ಕೊರೊನಾ ಕರ್ಫ್ಯೂ ಜಾರಿ
ವಿಜಯನಗರ, ಏಪ್ರಿಲ್ 19: ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ "ಕೊರೊನಾ ಕರ್ಫ್ಯೂ' ಅನ್ನು ಜಾರಿಗೊಳಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ವಿಜಯನಗರ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಈ ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು, ಉಳಿದಂತೆ ಎಲ್ಲಾ ಸೇವೆಗಳನ್ನು/ಸಂಚಾರಗಳನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು/ ಕಂಪನಿಗಳು/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದರೆ ಸಂಬಂಧಿಸಿದ ಕಾರ್ಮಿಕರು/ ನೌಕರರು, "ಕೊರೊನಾ ಕರ್ಫ್ಯೂ" ಅವಧಿಗೆ ಮುನ್ನವೇ ಕರ್ತವ್ಯಕ್ಕೆ ಹಾಜರಿರತಕ್ಕದ್ದು. ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟೆಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.
ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ಸರಕು ಸಾಗಾಣೀಕೆ ಮಾಡುವ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications