ಬಗರ್ ಹುಕುಂ ಜಮೀನಿನಲ್ಲಿ ಜೆಸಿಬಿ ಘರ್ಜನೆ, ಕಣ್ಣೆದುರೇ ಬೆಳೆಗಳು ನೆಲಸಮ: ರೈತರ ಹಿಡಿಶಾಪ
ಬಳ್ಳಾರಿ, ಜುಲೈ 30: ಬಗರ್ ಹುಕುಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಾ ಬೆಳೆ ಬೆಳೆದಿದ್ದ ರೈತರಿಗೆ ಇಂದು ಅಘಾತವುಂಟಾಗಿದ್ದು, ಕಣ್ಣೆದುರೇ ಬೆಳೆಯು ನೆಲಸಮಗೊಂಡಿತು.
ಕಷ್ಟಪಟ್ಟು ಸಾಲ-ಸೋಲ ಮಾಡಿ ಬೆಳೆದ ಪೈರು ನಾಶ ಮಾಡಲು ಮುಂದಾದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸಾಗುವಳಿ ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ನಾರಾಯಣಪುರದಲ್ಲಿ ನಡೆದಿದೆ.
70 ಕ್ಕೂ ರೈತರು ಕಳೆದ ಹಲವಾರು ವರ್ಷಗಳಿಂದ ಜಮೀನು ಸಾಗುವಳಿ ಮಾಡುತ್ತಾ ಬಂದಿದ್ದಾರೆ. ರೈತರನ್ನು ವಕ್ಕಲೆಬ್ಬಿಸಲು ಮುಂದಾದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಜಮೀನಿನಲ್ಲಿ ಬೆಳೆ ನಾಶಕ್ಕೆ ಬಳಸಿದ ಜೆಸಿಬಿ ಸೇರಿದಂತೆ ಇತರ ವಾಹನಗಳನ್ನು ತಡೆದು ರೈತರು ಆಕ್ಷೇಪಿಸಿದರು. ಅಲ್ಲದೇ ಸ್ಥಳದಲ್ಲಿ ರೈತರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಸಹ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಜಮೀನಿನಿಂದ ತಮ್ಮನ್ನು ಹೊರಗೆ ಕಳುಹಿಸುವಾಗ ಪ್ರಾಣ ಹೋದರೂ, ಭೂಮಿ ಬಿಡುವುದಿಲ್ಲವೆಂದು ರೈತರು ಜಮೀನು ಬಿಟ್ಟು ಆಚೆ ಹೋಗಲು ನಿರಾಕರಿಸಿದರು. ಈ ವೇಳೆ ಪೊಲೀಸರು ರೈತರನ್ನು ಜಮೀನಿನಿಂದಾಚೆ ಕಳುಹಿಸಲು ಮುಂದಾದರು. ವಿಷ ಕುಡಿಯುವುದಕ್ಕೆ ಕೆಲ ರೈತರು ಮುಂದಾದರು. ಈ ಘಟನೆಯಿಂದ ಅಘಾತಕ್ಕೊಳಗಾದ ರೈತ ಮಹಿಳೆಯೋರ್ವರು ಎಚ್ಚರ ತಪ್ಪಿ ಬಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications