ಬಳ್ಳಾರಿ ಲೋಕಸಭಾ ಉಪಚುನಾವಣೆ ಉಸ್ತುವಾರಿ ಡಿಕೆಶಿ ಹೆಗಲಿಗೆ
Recommended Video
ಬಳ್ಳಾರಿ , ಅಕ್ಟೋಬರ್ 8: ಬಳ್ಳಾರಿ ಲೋಕಸಭಾ ಉಪಚುನಾವಣೆ ಜವಾಬ್ದಾರಿ ಸಚಿವ ಡಿಕೆ ಶಿವಕುಮಾರ್ ಅವರ ಹೆಗಲೇರುವ ಸಾಧ್ಯತೆಗಳಿವೆ. ಈಗಾಗಲೇ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಉಪ ಚುನಾವಣೆಗೆ ದಿನಾಂಕ ಘೋಷಿಸಲಾಗಿದೆ.
ಬಳ್ಳಾರಿ ರಾಜಕಾರಣದಲ್ಲಿ ದಿನನಿತ್ಯ ಕಿತ್ತಾಟ ನಡೆಯುತ್ತಲೇ ಇದೆ. ಡಿಕೆ ಶಿವಕುಮಾರ್ ಅವರು ಬಳ್ಳಾರಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ ಸಹೋದರರು ದೂರುತ್ತಲೇ ಇದ್ದಾರೆ. ಹೀಗಿರುವಾಗ ಬಳ್ಳಾರಿ ಲೋಕಸಭಾ ಉಪ ಚುನಾವಣೆಯ ಜವಾಬ್ದಾರಿ ಡಿಕೆ ಶಿವಕುಮಾರ್ ಹೆಗಲೇರಲಿದೆಯೇ ಎಂದು ಕಾದು ನೋಡಬೇಕಿದೆ.
ಬಳ್ಳಾರಿ ಲೋಕಸಭಾ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿಗೆ ದೊಡ್ಡ ಸವಾಲು
ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಅಲ್ಪಾವಧಿ ಅವಧಿಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತ ಬಿಜೆಪಿ - ಕಾಂಗ್ರೆಸ್ ಅಭ್ಯರ್ಥಿಗಳು ಯಾರು? ಎನ್ನುವ ಪ್ರಶ್ನೆ ತೀವ್ರವಾಗಿ ಕಾಡುತ್ತಿದೆ. ರಾಜಕೀಯ ಲೆಕ್ಕಾಚಾರಗಳ ಪ್ರಕಾರ ಬಿ. ಶ್ರೀರಾಮುಲು ರಾಜೀನಾಮೆ ನೀಡಿರುವ ಲೋಕಸಭಾ ಸ್ಥಾನಕ್ಕೆ ಬಿ. ಶ್ರೀರಾಮುಲು ಸೋದರಳಿಯ, ಕಂಪ್ಲಿಯ ಮಾಜಿ ಶಾಸಕ ಟಿ.ಎಚ್. ಸುರೇಶಬಾಬು ಅವರನ್ನು ಓಲೈಸಿ ಕಣಕ್ಕಿಳಿಸಲು ಪಕ್ಷದ ವರಿಷ್ಠರು ಎಲ್ಲಾ ಪ್ರಯತ್ನಗಳನ್ನು ನಡೆಸಲಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಸೇರಿ, ಜಿಲ್ಲೆಯ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರನಾಯ್ಕ, ಸಂತೋಷ್ ಎಸ್. ಲಾಡ್, ಹಿರಿಯ ರಾಜಕಾರಣಿಗಾಳದ ಎನ್. ಸೂರ್ಯನಾರಾಯಣರೆಡ್ಡಿ, ಕೆ.ಸಿ. ಕೊಂಡಯ್ಯ, ರಾಜ್ಯಸಭಾ ಸದಸ್ಯ ನಾಸೀರ್ ಅಹ್ಮದ್, ಶಾಸಕರಾದ ಇ. ತುಕಾರಾಂ, ಬಿ. ನಾಗೇಂದ್ರ ಸೇರಿದಂತೆ ಅನೇಕ ರಾಜಕಾರಣಿಗಳ ಜೊತೆ ಉತ್ತಮ ಸ್ನೇಹಸಂಬಂಧ ಹೊಂದಿದ್ದು, ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.
ಉಪಚುನಾವಣೆ: 5 ಕ್ಷೇತ್ರಗಳ ಸಂಭಾವ್ಯ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು
2 ವಿಧಾನಸಭೆ ಹಾಗೂ ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧವಾಗಿದ್ದರೂ ಕೊನೆಯ ಕ್ಷಣದ ಲೆಕ್ಕಾಚಾರಗಳು ಅಂತಿಮಗೊಳ್ಳಬೇಕಿದೆ. ಯಾವ ಪಕ್ಷಗಳಲ್ಲೂ ಹೆಚ್ಚಿನ ಉತ್ಸಾಹ ಕಂಡುಬರುತ್ತಿಲ್ಲ. ಆದರೂ 2019ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಕದನವಾದ್ದರಿಂದ ಅನಿವಾರ್ಯ ಸಿದ್ಧತೆ ಕಂಡುಬರುತ್ತಿದೆ.
ಸಿದ್ದರಾಮಯ್ಯ v/s ಡಿಕೆಶಿ, ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಶುರು
ಸಚಿವ ಸಂಪುಟ ವಿಸ್ತರಣೆ ಎಂಬ ಜೇನುಗೂಡಿಗೆ ಕೈಹಾಕಲು ಹೊರಟಿದ್ದ ಆಡಳಿತಾರೂಢ ಜೆಡಿಎಸ್, ಕಾಂಗ್ರೆಸ್ಗೆ ದಿಢೀರ್ ಎದುರಾಗಿರುವ 'ಪಂಚ' ಕ್ಷೇತ್ರಗಳ ಫೈಟ್ ತುಸು ತಲೆಬೇನೆ ಹೆಚ್ಚಿಸಿದ್ದರೆ, ಸಂಪುಟ ವಿಸ್ತರಣೆ ಬಂಡಾಯದ ಲಾಭ ಪಡೆಯಲು ಕಾದು ಕುಳಿತಿದ್ದ ಬಿಜೆಪಿ ಪಾಲಿಗೆ ಅನಿರೀಕ್ಷಿತ ಹಾಗೂ ಅನಿವಾರ್ಯ ರಾಜಕೀಯ ಬೆಳವಣಿಗೆ.
ಉಪಚುನಾವಣೆ ಕದನ: ದೋಸ್ತಿ ಸರ್ಕಾರದ ಮೈತ್ರಿ ಜಪ ಯಶಸ್ವಿಯಾಗುತ್ತಾ?
ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಗೆದ್ದು ಪ್ರತಿಷ್ಠೆ ಜತೆಯಲ್ಲೇ ಸರ್ಕಾರ ಉಳಿಸಿಕೊಳ್ಳುವುದು ಮಿತ್ರಪಕ್ಷಗಳಿಗೆ ಅನಿವಾರ್ಯವಾಗಿದ್ದರೆ, ಅಲುಗಾಡುತ್ತಿರುವ ಸರ್ಕಾರವನ್ನು ಉಪ ಚುನಾವಣೆ ಗೆಲುವಿನ ಸಂಭ್ರಮದ ಬಿರುಗಾಳಿಯಲ್ಲೇ ಬೀಳಿಸುವುದು ಬಿಜೆಪಿಯ ಲೆಕ್ಕಾಚಾರ. ಇಂತಹ ಸಮಯದಲ್ಲಿ ಮೂರು ಸ್ಥಾನಗಳ ಲೋಕಸಭೆ ಉಪಸಮರ ಹೊಸ ಲೆಕ್ಕಾಚಾರಗಳಿಗೆ ಮುನ್ನುಡಿ ಬರೆದಿದೆ.