ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಉಗ್ರಪ್ಪಗೆ ಕೋರ್ಟ್ ನೀಡಿದ ಭರ್ಜರಿ ಶಾಕ್
ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಮತ್ತು ಪ್ರಖರ ಭಾಷಣಕಾರ ವಿ ಎಸ್ ಉಗ್ರಪ್ಪಗೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ನ್ಯಾಯಾಲಯ ಶಾಕ್ ನೀಡಿದೆ. ಉಗ್ರಪ್ಪನವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ.
ಉಪಚುನಾವಣೆ ನಡೆಯುವ ಒಂದು ದಿನದ ಮುನ್ನ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಎಂಟು ವರ್ಷದ ಹಿಂದಿನ ಕೋರ್ಟ್ ಆದೇಶವನ್ನು ಪಾಲಿಸದೇ ಇದ್ದಿದ್ದಕ್ಕೆ ಕೋರ್ಟ್ ಉಗ್ರಪ್ಪಗೆ ಈ ಶಾಕ್ ನೀಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಾಪಸ್ ಪಡೆಯಲು ವಿ ಎಸ್ ಉಗ್ರಪ್ಪ ಒತ್ತಡ ಹೇರುತ್ತಿದ್ದಾರೆಂದು ಮಮತಾ ಸಿಂಗ್ ಎನ್ನುವ ಮಹಿಳೆ, ಉಗ್ರಪ್ಪ ವಿರುದ್ದ ರಾಜ್ಯೋತ್ಸವದ ದಿನದಂದು ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದರು.
ಎಂಟು ವರ್ಷದ ಹಿಂದಿನ ಅಪಘಾತದ ಕೇಸಿಗೆ ಸಂಬಂಧಿಸಿದಂತೆ, ಸುದೀರ್ಘ ವಿಚಾರಣೆ ನಡೆಸಿದ ದೊಡ್ಡಬಳ್ಳಾಪುರ ನ್ಯಾಯಾಲಯ ಉಗ್ರಪ್ಪನವರ ಚರಾಸ್ತಿ ಮುಟ್ಟುಗೋಲಿಗೆ ಆದೇಶ ನೀಡಿದೆ. ಇದು ಚುನಾವಣೆಗೆ ಮುನ್ನ ಉಗ್ರಪ್ಪನವರಿಗಾದ ಹಿನ್ನಡೆಯೆಂದೇ ಉಲ್ಲೇಖಿಸಲಾಗುತ್ತಿದೆ.
ಸ್ಥಳೀಯ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ, ಇದರ ಮರು ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಇನ್ನು ಹತ್ತು ದಿನದೊಳಗೆ ಉಗ್ರಪ್ಪನವರ ಚರಾಸ್ತಿಯನ್ನು ಮುಟ್ಟುಗೋಲು ಹಾಕಲು ಆದೇಶ ಹೊರಡಿಸಿದೆ. ಏನಿದು ಕೇಸ್? ಮುಂದೆ ಓದಿ

ಉಗ್ರಪ್ಪನವರ ಟೊಯಾಟೋ ಕ್ವಾಲಿಸ್ ಕಾರ್
ಬೆಂಗಳೂರಿನ ವ್ಯಾಪಾರಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಯಲಹಂಕ - ದೊಡ್ಡಬಳ್ಳಾಪುರ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ , ಹಿಂದೆಯಿಂದ ಬರುತ್ತಿದ್ದ ಉಗ್ರಪ್ಪನವರ ಟೊಯಾಟೋ ಕ್ವಾಲಿಸ್ ಕಾರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡಿದಿದೆ. ಅಪಘಾತದ ಈ ಘಟನೆಯಲ್ಲಿ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವುದು ಒಂದೆಡೆಯಾದರೆ, ಅವರ ವಾಹನ ಸಂಪೂರ್ಣ ಜಖಂಗೊಂಡಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯ
ಆಗಸ್ಟ್ 2008ರಲ್ಲಿ ಈ ಘಟನೆ ನಡೆದಿತ್ತು. ವಾಹನ ಸವಾರ ಚೇತರಿಸಿಕೊಂಡ ನಂತರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯ ಅಕ್ಟೋಬರ್ 2017ರಂದು 67,500 ರೂಪಾಯಿ ಪರಿಹಾರ ನೀಡುವಂತೆ ವಿ ಎಸ್ ಉಗ್ರಪ್ಪನವರಿಗೆ ಸೂಚಿಸಿತ್ತು. ಅದನ್ನು ಉಗ್ರಪ್ಪ ಪಾಲಿಸಿರಲಿಲ್ಲ.

ಬಡ್ಡಿ ಸಮೇತ 94,925 ರೂಪಾಯಿ ಪಾವತಿಸುವಂತೆ ಸೂಚಿಸಿದ ಕೋರ್ಟ್
ಕೋರ್ಟ್ ವಿಚಾರಣೆಗೂ ಆಗಮಿಸದೇ ಇದ್ದ ಉಗ್ರಪ್ಪ, ನ್ಯಾಯಾಲಯ ಸೂಚಿಸಿದ ಪರಿಹಾರದ ಮೊತ್ತವನ್ನೂ ಪಾವತಿಸಿರಲಿಲ್ಲ. ದ್ವಿಚಕ್ರ ವಾಹನ ಸವಾರ, ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ಜೊತೆಗೆ, ನ್ಯಾಯಾಂಗ ನಿಂದನೆ ಕೇಸನ್ನೂ ದಾಖಲಿಸಿದ್ದರು. ಶುಕ್ರವಾರ (ನ 2) ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪರಿಹಾರ ಹಣಕ್ಕೆ ಬಡ್ಡಿ ಸಮೇತ 94,925 ರೂಪಾಯಿ ಪಾವತಿಸುವಂತೆ ಸೂಚಿಸಿದೆ.

ಉಗ್ರಪ್ಪನವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಆದೇಶ
ಇದೂ ಅಲ್ಲದೇ, ಉಗ್ರಪ್ಪನವರಿಗೆ ಸೇರಿದ ಮನೆಯಲ್ಲಿ ಏನೇನು ಚರಾಸ್ತಿ ಇದೆಯೋ, ಅದನ್ನೂ ಮುಟ್ಟುಗೋಲು ಹಾಕುವಂತೆ ಸೂಚಿಸಿದೆ. ನವೆಂಬರ್ 13ರರವೊಳಗೆ ಮುಟ್ಟುಗೋಲು ಹಾಕಿಕೊಳ್ಳಿ ಎಂದು ಕೋರ್ಟ್ ಆದೇಶ ನೀಡಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಮುಗಿದ ನಂತರ ಕೋರ್ಟ್ ಆದೇಶ ಹೊರಬಿದ್ದಿರುವುದರಿಂದ, ಸಂಭಾವ್ಯ ಭಾರೀ ಮುಖಭಂಗದಿಂದ ಸ್ವಲ್ಪಮಟ್ಟಿಗೆ ಕಾಂಗ್ರೆಸ್ ಬಚಾವ್ ಆಗಿದೆ.

ತನ್ನ ಮಗಳ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣ
ತನ್ನ ಮಗಳ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ ಎಸ್ ಉಗ್ರಪ್ಪ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಗೆ ದೂರು ನೀಡಿದ್ದರು. ಉಗ್ರಪ್ಪ ಈ ಸಮಿತಿಯ ಅಧ್ಯಕ್ಷರು ಕೂಡಾ.. ಆದರೆ ದೆಹಲಿಯಿಂದ ಒತ್ತಡ ಬರುತ್ತಿದೆ ಎನ್ನುವ ಕಾರಣಕ್ಕಾಗಿ ಕೇಸನ್ನು ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ. ತಪ್ಪಿತಸ್ಥರನ್ನು ಉಗ್ರಪ್ಪ ರಕ್ಷಿಸುತ್ತಿದ್ದಾರೆಂದು ಮಮತಾ ಸಿಂಗ್ ಎನ್ನುವ ಮಹಿಳೆ ದೂರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications