Get Updates
Get notified of breaking news, exclusive insights, and must-see stories!

ಬಳ್ಳಾರಿಗೆ ನೂತನ ಎಸ್‌ಪಿ ನೇಮಕ

ಬಳ್ಳಾರಿ, ಜನವರಿ 8: ಬಳ್ಳಾರಿ ಬ್ಯಾನರ್ ಘರ್ಷಣೆ ವಿಚಾರವಾಗಿ ರಾಜ್ಯ ಸರ್ಕಾರ ಎಸ್‌ಪಿ ಪವನ್ ನೆಜ್ಜೂರ್ ಅವನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಇದೀಗ ಇವರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. ಹಾಗಾದ್ರೆ ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಳ್ಳಾರಿ ಬ್ಯಾನರ್ ಘರ್ಷಣೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರವು ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನೂ ಕೂಡ ವರ್ಗಾವಣೆ ಮಾಡಲಾಗಿದೆ. ಇದೀಹ ಡಾ.ಪಿ.ಎಸ್.ಹರ್ಷ ಬಳ್ಳಾರಿ ವಲಯದ ಹೊಸ ಐಜಿಪಿ, ಡಾ.ಸುಮನ್ ಪೆನ್ನೆಕರ್ ಅವರನ್ನು ನೂತನ ಎಸ್‌ಪಿ ಆಗಿ ನೇಮಕ ಮಾಡಲಾಗಿದೆ.

Dr Suman Pennekar Appointed as New SP of Ballari

ರಾಜ್ಯದ 5 ಐಪಿಎಸ್‌ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಪ್ರಮುಖವಾಗಿ ಬಳ್ಳಾರಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಇತ್ತೀಚೆಗಷ್ಟೇ ಬ್ಯಾನರ್ ಘರ್ಷಣೆ ಸಂಬಂಧ ಅಮಾನತು ಮಾಡಲಾಗಿದ್ದು, ಅವರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ ನೂತನ ಎಸ್‌ಪಿ ವಿವರ: ಬೆಂಗಳೂರಿನ ಗುಪ್ತವಾರ್ತೆ ವಿಭಾಗದ ಡಿಸಿಪಿ ಆಗಿದ್ದ ಸುಮನ್‌ ಪನ್ನೇಕರ್ ಅವರನ್ನು ಬಳ್ಳಾರಿಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ 31ರಂದು ಹೊಸದಾಗಿ ಎಸ್‌ಪಿ ಆಗಿದ್ದ ಪವನ್‌ ನೆಜ್ಜೂರ್‌ ಅವರನ್ನು ಬ್ಯಾನರ್ ಘರ್ಷಣೆ ಪ್ರಕರಣ ಕಾರಣ ಅಮಾನತು ಮಾಡಲಾಗಿತ್ತು.

ನೂತನ ಡಿಐಜಿ ನೇಮಕ: ವರ್ತಿಕಾ 2026ರ ಹೊಸ ವರ್ಷದ ಹಿಂದಿನವೇ ರಾಜ್ಯದಲ್ಲಿ 48 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಮತ್ತೆ ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆಗಿದೆ. 2004ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪಿ.ಎಸ್‌ ಹರ್ಷ ಅವರನ್ನು ಬಳ್ಳಾರಿ ವಲಯದ ಹೊಸ ಪೊಲೀಸ್ ಮಹಾನಿರೀಕ್ಷಕರಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ವರ್ತಿಕಾ ಕಟಿಯಾರ್‌ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಐಎಎಸ್ ಅಧಿಕಾರಿಗಳಾದ ಸಲ್ಮಾ ಕೆ.ಫಹೀಮ್ ಮತ್ತು ಕನಗವಲ್ಲಿ ಎಂ.ಅವರನ್ನು ಬುಧವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ಸಲ್ಮಾ ಕೆ.ಫಹೀಮ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಪರಿಶಿಷ್ಟ ಪಂಗಡ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.

ಇನ್ನೂ ಈ ಮೊದಲು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಆಗಿದ್ದ ಕನಗವಲ್ಲಿ ಎಂ.ಅವರನ್ನು ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ರಾಜ್ಯ ವೈದ್ಯಕೀಯ ಉಪಕರಣಗಳ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

22 ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಹೊಸ ವರ್ಷದ ಮುನ್ನ ದಿನವೇ ಅಂದರೆ ಡಿಸೆಂಬರ್ 31ರಂದು ದಿಢೀರ್ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸೇರಿದಂತೆ 22 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಪ್ರಮುಖವಾಗಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಸೇರಿ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳ ನೇಮಕ ಮಾಡಲಾಗಿದೆ. ಶಿವಮೊಗ್ಗ, ತುಮಕೂರಿಗೆ ಇನ್ನೂ ನಿಯೋಜನೆ ಮಾಡಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+