ಬಳ್ಳಾರಿಯಲ್ಲಿ ಕುಡಿಯುವ ನೀರಿನ ಕೊರತೆ: ಪತ್ರದ ಮೂಲಕ ಗಮನ ಸೆಳೆದ ಮಾಜಿ ಸಚಿವ
ಬಳ್ಳಾರಿ, ಮಾರ್ಚ್ 11: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತಿದೆ. ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಕಂಡುಬಂದಿದೆ. ಗ್ರಾಮಗಳಿಗೆ ನೀರು ಒದಗಿಸುವ ಬಗ್ಗೆ ಕರ್ನಾಟಕ ನೀರಾವರಿ ನಿಗಮದ ಇಂಜಿನಿಯರ್, ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆಯಲಾಗಿದೆ.
ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಬಿ. ನಾಗೇಂದ್ರ ಶಾಸಕರು ಹಾಗೂ ಮಾಜಿ ಸಚಿವರು, ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಪತ್ರವನ್ನು ಬರೆದಿದ್ದಾರೆ. ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದ ವಿವರಗಳು: ಮುಖ್ಯ ಇಂಜಿನಿಯರ್, ಕರ್ನಾಟಕ ನೀರಾವರಿ ನಿಗಮ, ನೀರಾವರಿ ಕೇಂದ್ರ ವಲಯ, ಮುನಿರಾಬಾದ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ಮತಕ್ಷೇತ್ರವಾದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂ. ಗೋನಾಳು, ಜಾಲಿಹಾಳು, ಹೊಸಯರಗುಡಿ, ಸಿಂಧವಾಳ, ಹಳೆಯರಗುಡಿ, ಬೊಮ್ಮನಹಾಳು ಮತ್ತು ಬೆಣಕಲ್ಲು ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.
ಸದರಿ ಗ್ರಾಮಗಳ ಹತ್ತಿರದಲ್ಲಿ ಕುಡಿಯುವ ನೀರಿನ ಕೆರಗಳು ಲಭ್ಯವಿದ್ದು, ಸದರಿ ಕೆರೆಗಳಿಗೆ ತುಂಗಭದ್ರಾ ಬಲದಂಡ ಕೆಳಮಟ್ಟದ ಕಾಲುವ ಕಿ. ಮೀ. 146/ 300ರಲ್ಲಿ ಕುಡಿಯುವ ನೀರಿಗಾಗಿ ನೀರನ್ನು ಪಡೆಯಲಾಗುತ್ತಿದ್ದು, ಸದ್ಯ ತುಂಗಭದ್ರಾ ಮಂಡಳಿಯವರು ಸದರಿ ಸ್ಥಳದಿಂದ ನೀರನ್ನು ಪಡೆಯಲು ತುಂಗಭದ್ರಾ ಮಂಡಳಿಯವರ ಅನುಮತಿ ಪಡೆಯುವುದು ಅವಶ್ಯಕತೆ ಎಂದು ನೀರು ಪೂರೈಸುವುದನ್ನು ನಿಲ್ಲಿಸಿರುತ್ತಾರೆ.
ತುಂಗಭದ್ರಾ ಮಂಡಳಿಯವರ ಅನುಮತಿ ಪಡೆಯುವಲ್ಲಿ ವಿಳಂಬವಾಗಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಸದರಿ ಕೆರೆಯ ಹತ್ತಿರವಿರುವ ಡಿಪಿ ನಂ. 41ಕ್ಕೆ ಹೆಚ್ಚುವರಿಯಾಗಿ ಒಂದು ಕ್ಯೂಸೆಕ್ ನೀರನ್ನು ಒದಗಿಸಿ ಕೊಡಲು ಸಂಬಧಪಟ್ಟವರಿಗೆ ತಾವು ಸೂಕ್ತ ನಿರ್ದೇಶನ ನೀಡಬೇಕೆಂದು ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ ಸರ್ಕಾರ ಈಗಾಗಲೇ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿಯನ್ನು ತೆರೆಯುವ ಮೂಲಕ ಜನರು ದೂರು ಸಲ್ಲಿಕೆ ಮಾಡಲು ಅವಕಾಶ ನೀಡಬೇಕು ಎಂದು ನಿರ್ದೇಶನವನ್ನು ಕೊಟ್ಟಿದೆ.
ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಎಲ್ಲಾ ಕೆರೆಗಳಲ್ಲಿ ಕುಡಿಯುವ ನೀರು ಸಂಗ್ರಹಣೆ ಮಾಡಿಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಾರಿಯ ಬೇಸಿಗೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಸುಮಾರು 71 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಹುದು ಎಂದು ಜಿಲ್ಲಾಡಳಿತ ವರದಿ ತಯಾರು ಮಾಡಿದೆ. ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications