ಬಳ್ಳಾರಿಯಲ್ಲಿ ಪರಿಸರ ಸ್ನೇಹಿ ಬಸ್ ನಿಲ್ದಾಣಗಳು
ಬಳ್ಳಾರಿ, ನ. 12 : ಜಿಲ್ಲಾ ಹಂತಗಳಲ್ಲಿರುವ ಬಸ್ ನಿಲ್ದಾಣಗಳನ್ನು ಜನರು ಉಪಯೋಗಿಸುವುದಿಲ್ಲ, ಅವುಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದಿಲ್ಲ ಎಂಬ ಆರೋಪಗಳು ಇವೆ. ಆದರೆ, ಬಳ್ಳಾರಿ ಮತ್ತು ಹೊಸಪೇಟೆ ತಾಲೂಕಿನಲ್ಲಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ.
ನಗರ ಯೋಜನಾ ಇಲಾಖೆ, ನಿರ್ಮಿತಿ ಕೇಂದ್ರಗಳು ಈ ಪರಿಸರ ಸ್ನೇಹಿ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಮತ್ತು ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ಹೊಂದಿವೆ. ಜಿಲ್ಲಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಈ ನಿರ್ವಹಣೆ ನೋಡಿಕೊಳ್ಳುವ ಸಂಸ್ಥೆಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಾರೆ.
ಐಎಸ್ಓ ಪ್ರಮಾಣ ಪತ್ರ ಪಡೆದಿರುವ ಈ ಬಸ್ ನಿಲ್ದಾಣಗಳನ್ನು ಕಡಿಮೆ ವೆಚ್ಚದಲ್ಲಿ ನಿರ್ಮಿಸಬಹುದಾಗಿದೆ ಮತ್ತು ನಿರ್ವಹಣೆ ವೆಚ್ಚ ಸಹ ಕಡಿಮೆಯಾಗಲಿದೆ. 15*25 ಅಳತೆ ಈ ನಿಲ್ದಾಣಗಳು ಬಿಸಿಲು-ಮಳೆಯಿಂದ ಪ್ರಯಾಣಿಕರಿಗೆ ರಕ್ಷಣೆ ನೀಡುತ್ತವೆ. ಬಳ್ಳಾರಿಯ ಗಣಿ ಕಂಪನಿಗಳು ಜಿಲ್ಲೆಯಲ್ಲಿ ಇಂತಹ ಬಸ್ ನಿಲ್ದಾಣ ನಿರ್ಮಿಸಲು ಅನುದಾನ ನೀಡಿವೆ.
ಜಿಲ್ಲೆಯಲ್ಲಿ ಜನಪ್ರತಿನಿಧಿಗಳ ಅನುದಾನದಿಂದ ನಿರ್ಮಿಸಿರುವ ಬಸ್ ನಿಲ್ದಾಣಗಳನ್ನು ಜನರು ಬಳಸುತ್ತಿಲ್ಲ, ಅವುಗಳು ಪ್ರಾಣಿಪಕ್ಷಿಗಳ ತಾಣಗಳಾಗಿವೆ ಎಂಬ ಆರೋಪಗಳಿತ್ತು. ಇದರಿಂದ ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. (ಬಸ್ ನಿಲ್ದಾಣಗಳ ಚಿತ್ರಗಳು)

ಕಡಿಮೆ ವೆಚ್ಚದ ಬಸ್ ನಿಲ್ದಾಣ
ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಬಸ್ ನಿಲ್ದಾಣಗಳನ್ನು ಬಳ್ಳಾರಿ ಮತ್ತು ಹೊಸಪೇಟೆ ತಾಲೂಕುಗಳಲ್ಲಿ ನಿರ್ಮಿಸಲಾಗಿದೆ. ಇದರ ನಿರ್ವಹಣೆಯೂ ವೆಚ್ಚವೂ ಕಡಿಮೆ ಇದೆ.

ಗಣಿಧಣಿಗಳ ಸಹಕಾರ
ಪರಿಸರ ಸ್ನೇಹಿ ಬಸ್ ನಿಲ್ದಾಣಗಳನ್ನು ಜಿಲ್ಲೆಯ ಗಣಿಧಣಿಗಳ ಸಹಕಾರದೊಂದಿಗೆ ನಿರ್ಮಿಸಲಾಗಿದೆ. ನಗರ ಯೋಜನಾ ಇಲಾಖೆ, ನಿರ್ಮಿತಿ ಕೇಂದ್ರಗಳು ಇದರ ಉಸ್ತುವಾರಿ ನೋಡಿಕೊಳ್ಳುತ್ತವೆ. ಜಿಲ್ಲಾಧಿಕಾರಿಯೂ ನಿರ್ವಹಣೆಯ ನೋಡಿಕೊಳ್ಳುವ ಸಂಸ್ಥೆಗಳಿಗೆ ಅಗತ್ಯ ಸಲಹೆ ನೀಡುತ್ತಾರೆ.

ಉತ್ತಮ ಕಾಮಗಾರಿ
15*25 ಅಳತೆ ಈ ನಿಲ್ದಾಣಗಳು ಬಿಸಿಲು-ಮಳೆಯಿಂದ ಪ್ರಯಾಣಿಕರಿಗೆ ರಕ್ಷಣೆ ನೀಡುತ್ತವೆ. ಇವುಗಳ ನಿರ್ಮಾಣ ಕಾಮಗಾರಿ ಉತ್ತಮವಾಗಿದೆ. ಇವು ಐಎಸ್ಓ 9001-2008 ಪ್ರಮಾಣ ಪತ್ರ ಪಡೆದಿವೆ.

ಸಹಾಯ ಮಾಡಿದ ಗಣಿಮಾಲೀಕರು
ವಿಭೂತಿಗುಡ್ಡ ಮೈನ್ಸ್ ವ್ಯವಸ್ಥಾಪಕ ಎಸ್.ಕೆ.ಮೋದಿ ಅವರ ಮೋದಿ ಫೌಂಡೇಶನ್, ಅಗರ್ ವಾಲ್ ಮಹಿಳಾ ಮಂಡಳಿ, ಜಾನಕಿ ಫ್ಯಾಕ್ಟರಿ, ಭಾರತ್ ಮೈನ್ಸ್ ಅಂಡ್ ಮಿನರಲ್ಸ್ ಮತ್ತು ವಿವಿಧ ಕಂಪನಿಗಳು ಈ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಹಾಯ ಮಾಡಿವೆ.

ಆರೋಪಗಳಿದ್ದವು
ಜಿಲ್ಲೆಯಲ್ಲಿ ಜನಪ್ರತಿನಿಧಿಗಳ ಅನುದಾನದಿಂದ ನಿರ್ಮಿಸಿರುವ ಬಸ್ ನಿಲ್ದಾಣಗಳನ್ನು ಜನರು ಬಳಸುತ್ತಿಲ್ಲ, ಅವುಗಳು ಪ್ರಾಣಿಪಕ್ಷಿಗಳ ತಾಣಗಳಾಗಿವೆ ಎಂಬ ಆರೋಪಗಳಿತ್ತು. ಇದರಿಂದ ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ

ಬಿಸಿಲು-ಮಳೆಯಿಂದ ರಕ್ಷಣೆ
ಈ ಪರಿಸರ ಸ್ನೇಹಿ ಬಸ್ ನಿಲ್ದಾಣಗಳು ಜನರಿಗೆ ಬಿಸಿಲು-ಮಳೆಯಿಂದ ಪ್ರಯಾಣಿಕರಿಗೆ ರಕ್ಷಣೆ ನೀಡುತ್ತವೆ. ಇವುಗಗಳಿಗೆ ಹಾನಿಉಂಟಾದರೆ ದುರಸ್ಥಿ ಮಾಡುವುದು ಬಹಳ ಸುಲಭವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications