ಬಳ್ಳಾರಿ: ವಲಸೆ ಹಕ್ಕಿ ಭೀಮಾನಾಯ್ಕಗೆ ಟಿಕೆಟ್ ಖಾತ್ರಿ ಇಲ್ಲ
ಬಳ್ಳಾರಿ, ಏಪ್ರಿಲ್. 03 : ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ, ಜೆಡಿಎಸ್ನಿಂದ ಜಿಗಿದು, ಕಾಂಗ್ರೆಸ್ ಸೇರಿರುವ ಮಾಜಿ ಶಾಸಕ ಭೀಮಾನಾಯ್ಕ ಅವರು ಅತಂತ್ರರಾಗಿದ್ದಾರೆ.
ಭೀಮಾನಾಯ್ಕ್ ಅವರಿಗೆ ಟಿಕೆಟ್ ನೀಡುವಲ್ಲಿ ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು 'ಸಾಮಾಜಿಕ ನ್ಯಾಯ ನೀತಿ ಪಾಲನೆ' ಮಾಡುವುದಾಗಿ ಹೇಳಿದ್ದೇ ತಡ, ತೀವ್ರ ಆತಂಕಕ್ಕೆ ಒಳಗಾದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಸಮಸ್ಯೆಯನ್ನು ಹೈಕಮಾಂಡ್ ಹಂತದಲ್ಲೇ ಇತ್ಯರ್ಥ ಮಾಡಿಕೊಳ್ಳಲು ನಿರ್ಧರಿಸಿ ದೆಹಲಿಗೆ ದಿಢೀರನೆ ಹಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಿರುವ ಏಳು ಶಾಸಕರಿಗೆ ಟಿಕೇಟ್ ನೀಡುವ ಕುರಿತು ನಡೆದ ಚರ್ಚೆಯಲ್ಲಿ ಬಳ್ಳಾರಿ ಜಿಲ್ಲೆಯಿಂದ ಜಿಗಿದ ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಭೀಮಾನಾಯ್ಕ ಅವರಿಗೆ ಟಿಕೇಟ್ ನೀಡುವಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ.
ಮಾತುಕತೆಯ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು 'ಹೂವಿನಹಡಗಲಿ ವಿಧಾನಸಭಾ ಕ್ಷೇತ್ರವೂ ಎಸ್ಸಿಗೆ ಮೀಸಲಾಗಿದ್ದು, ಎಸ್ಸಿ ಪಟ್ಟಿಯ ಲಂಬಾಣಿ ಜನಾಂಗದ ಪಿ.ಟಿ. ಪರಮೇಶ್ವರನಾಯ್ಕ ಅವರಿಗೆ ಕಾಂಗ್ರೆಸ್ ಟಿಕೇಟ್ ನೀಡಲಾಗುತ್ತದೆ.
ಪಿಟಿಪಿ ಹಾಲಿ ಕಾಂಗ್ರೆಸ್ ಶಾಸಕರು, ಕಟ್ಟಾ ಕಾಂಗ್ರೆಸ್ ಬೆಂಬಲಿಗರು, ಮಾಜಿ ಸಚಿವರು. ಪರಿಸ್ಥಿತಿ ಹೀಗಿರುವಾಗ, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಎಸ್ಸಿಗಳು (ಎಡಗೈ - ಬಲಗೈ) ಸಂಖ್ಯೆ ಹೆಚ್ಚಿರುವ ಕಾರಣ ಸೋಲು - ಗೆಲುವುಗಳ ಲೆಕ್ಕಾಚಾರಕ್ಕಿಂತಲೂ ಪಕ್ಷಕ್ಕೆ ಸಾಮಾಜಿಕ ನ್ಯಾಯ ನೀತಿಯ ಪಾಲನೆ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಭೀಮಾನಾಯ್ಕ ಅವರಿಗೆ ಟಿಕೇಟ್ ಗ್ಯಾರಂಟಿ ಇಲ್ಲ' ಎಂದು ಏರುಧ್ವನಿಯಲ್ಲಿ ಹೇಳಿಯೇಬಿಟ್ಟರು.

ಸಭೆಯಲ್ಲಿದ್ದ ಸಂತೋಷ್ ಎಸ್. ಲಾಡ್, ಮುಖಂಡರನ್ನು ಸಮಜಾಯಿಸಲು ಸಾಕಷ್ಟು ಪ್ರಯತ್ನಪಟ್ಟರೂ, ಯಶಸ್ಸು ಸಾಧಿಸಲಿಲ್ಲ. ನನ್ನ ನೇತೃತ್ವದಲ್ಲಿ, ರಾಹುಲ್ಗಾಂಧಿ ಸಮ್ಮುಖದಲ್ಲಿ ಪಕ್ಷ ಸೇರಿದವರಿಗೇ ಹೀಗಾದಲ್ಲಿ ಹೇಗೆ? ಎಂದು ಪ್ರಶ್ನಿಸಿದ ಲಾಡ್, ಸಮಾಧಾನದ ಉತ್ತರ ಪಡೆಯಲಿಲ್ಲ. ಏಕಾಏಕಿ ಉಂಟಾದ ಈ ಬೆಳವಣಿಗೆಯಿಂದ ತೀವ್ರ ಅಸಮಾಧಾನಗೊಂಡ ಸಂತೋಷ್ ಲಾಡ್, 'ಈ ಸಮಸ್ಯೆಗೆ ಏಐಸಿಸಿ ವರಿಷ್ಠರಲ್ಲಿ ಇತ್ಯರ್ಥ ಕಂಡುಕೊಳ್ಳುವ. ಭೀಮಾನಾಯ್ಕನಿಗೆ ಟಿಕೇಟ್ ಗ್ಯಾರೆಂಟಿ ಮಾಡಿಕೊಂಡು ಬರುವೆ' ಎನ್ನುತ್ತಲೇ ದೆಹಲಿಗೆ ಹಾರಿಯೇಬಿಟ್ಟರು.
ಆದರೆ, ಭೀಮಾನಾಯ್ಕ, ಕ್ಷೇತ್ರದಲ್ಲಿ ಸಂಚರಿಸುತ್ತ, ತನಗೇ ಟಿಕೇಟ್ ಎನ್ನುವ ಖಾತರಿಯಲ್ಲಿ ಮುಖಂಡರನ್ನು ಭೇಟಿ ಮಾಡುತ್ತಲೇ ಇದ್ದಾರೆ. ಕೊಟ್ಟೂರೇಶ್ವರನಿಗೆ ಹೊಸ ತೇರು ನಿರ್ಮಾಣಕ್ಕೆ 2 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಿಸಿದ್ದು, ಮಾಲ್ವಿ ಜಲಾಶಯದಲ್ಲಿ ನೀರು ಸಂಗ್ರಹ ಮಾಡಿದ್ದು, ಅಭಿವೃದ್ಧಿಗೆ ಅನುದಾನ ತಂದಿದ್ದನ್ನು ಪ್ರಚಾರದ ಸರಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications