ಸಂಡೂರು : ತುಕಾರಾಂ ಹ್ಯಾಟ್ರಿಕ್ ತಪ್ಪಿಸಲು ಜೆಡಿಎಸ್- ಬಿಜೆಪಿ ಯತ್ನ
ಬಳ್ಳಾರಿ, ಏಪ್ರಿಲ್ 10: ಸಂಡೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳು ಘೋಷಣೆ ಆಗಿದ್ದು, ಮೇಲ್ನೋಟಕ್ಕೆ ತ್ರಿಕೋನಸ್ಪರ್ಧೆ ಇದೆ. ಆದರೆ, ಹಾಲಿ ಕಾಂಗ್ರೆಸ್ ಶಾಸಕ ಇ. ತುಕಾರಾಂ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಇ. ತುಕಾರಾಂ, ಬಿಜೆಪಿ ಡಿ. ರಾಘವೇಂದ್ರ ಮತ್ತು ಜೆಡಿಎಸ್ ವಸಂತಕುಮಾರ್ ಸ್ಪರ್ಧಿಸುತ್ತಿದ್ದಾರೆ. ಲಾಡ್ ಮತ್ತು ಘೋರ್ಪಡೆ ಮನೆತನದ ರಾಜಕೀಯ ಒಳಪಟ್ಟುಗಳನ್ನು ಅತೀ ಹತ್ತಿರದಿಂದ ಕಂಡಿರುವ ಇ. ತುಕಾರಾಂ ಈ ಎರಡು ಕುಟುಂಬಗಳ ಬೆಂಬಲದಿಂದಲೇ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.

ಘೋರ್ಪಡೆ ಕುಟುಂಬದ ಕಾರ್ತಿಕೇಯ ಅವರು ಬಿಜೆಪಿ ಸೇರಿದ್ದರೂ, ಸಮರ್ಥ ಎದುರಾಳಿ ಇಲ್ಲದ ಕಾರಣ ಧರ್ಮಾಪುರ ರಾಘವೇಂದ್ರ ಅವರಿಗೆ ಟಿಕೇಟ್ ಘೋಷಣೆ ಆಗಿದೆ. ಜೆಡಿಎಸ್, ವಸಂತ ಕುಮಾರ್ ಅವರನ್ನು ಕಣಕ್ಕಿಳಿಸಲಿದೆ. ಒಂದರ್ಥದಲ್ಲಿ ಕಾಂಗ್ರೆಸ್ - ಬಿಜೆಪಿ ಜಿದ್ದಾಜಿದ್ದಿ ಏರ್ಪಡಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕ್ಷೇತ್ರದಲ್ಲಿ ಇ. ತುಕಾರಾಂ ಬಗ್ಗೆ ಸಾಕಷ್ಟು ಅಪಸ್ವರಗಳು ಕೇಳುತ್ತಿವೆ. ಆದರೆ, ಅನುಭವಿ, ಎದುರಾಳಿಗಳು ಇಲ್ಲದ ಕಾರಣ ಮತದಾರರು ಅನಿವಾರ್ಯವಾಗಿ ಇವರನ್ನೇ ಆಯ್ಕೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಕಾಂಗ್ರೆಸ್ನಿಂದ ಸಂಡೂರಿನ 2ನೇ ವಾರ್ಡ್ನಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದ ಧರ್ಮಾಪುರ ರಾಘವೇಂದ್ರ ರಾಜೀನಾಮೆ ನೀಡಿ, ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಡಿ. ರಾಘವೇಂದ್ರ ಅವರು ತಂದೆ ಡಿ. ಕೃಷ್ಣಪ್ಪ ಅವರ ರಾಜಕೀಯ ಸೇವೆ, ವಾಲ್ಮೀಕಿ ಸಮಾಜಕ್ಕೆ ದುಡಿದ ಅನುಭವ, ಪರಿಚಯದ ಆಧಾರದ ಮೇಲೆ ಸ್ಪರ್ಧಿಸುತ್ತಿದ್ದಾರೆ.
ಕಾಂಗ್ರೆಸ್ನ ಇ. ತುಕಾರಾಂ ಅವರಿಗೆ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳು ಪ್ರಭಲವಾದ ಪೈಪೋಟಿ ನೀಡಲಾರರು ಎನ್ನುವುದು ಮತದಾರರ ಲೆಕ್ಕಾಚಾರ. ಯಾವುದಕ್ಕೂ ಚುನಾವಣಾ ಬಿಸಿ ಜಿಲ್ಲೆಯಲ್ಲಿ ಇದೀಗ ಪ್ರಾರಂಭವಾಗಿದ್ದು, ಮುಂದಿನ ದಿನಗಳ ಬಗ್ಗೆ ಕಾದು ನೋಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications