ಹೊಸಪೇಟೆಯಲ್ಲಿ ಚಲನಚಿತ್ರೋತ್ಸವ ಸಪ್ತಾಹ ಆರಂಭ
ಹೊಸಪೇಟೆ, ನವೆಂಬರ್ 15 : ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಹಾಗೂ ಪ್ರಾದೇಶಿಕ ಚಲನಚಿತ್ರಗಳ ಪ್ರದರ್ಶನ 'ಚಲನಚಿತ್ರೋತ್ಸವ ಸಪ್ತಾಹ' ಹೊಸಪೇಟೆಯ ಮೀರ್ ಆಲಂ ಚಲನಚಿತ್ರಮಂದಿರದಲ್ಲಿ ಇಂದಿನಿಂದ (ನವೆಂಬರ್ 17) ಆರಂಭಗೊಂಡಿತು.
ಚಲನಚಿತ್ರೋತ್ಸವ ಸಪ್ತಾಹಕ್ಕೆ ಶುಕ್ರವಾರ (ನವೆಂಬರ್ 17) ಬೆಳಗ್ಗೆ 8:30ಕ್ಕೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೆಂಕೋಬಪ್ಪ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಶಿ ಅವರು ಚಾಲನೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಚಲನಚಿತ್ರಗಳನ್ನು ಚಲನಚಿತ್ರೋತ್ಸವ ಸಪ್ತಾಹದಲ್ಲಿ ಉಚಿತವಾಗಿ ಪ್ರದರ್ಶಿಸಲಾಗುತ್ತಿದೆ.
ಪ್ರತಿನಿತ್ಯ ಬೆಳಗ್ಗೆ 8ರಿಂದ 11ರವರೆಗೆ ಚಲನಚಿತ್ರ ಪ್ರದರ್ಶನ ನಡೆಯಲಿದೆ.

ಮೊದಲ ದಿನ 2016ನೇ ಸಾಲಿನಲ್ಲಿ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯಲ್ಲಿ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದ 'ಅಮರಾವತಿ' ಚಲನಚಿತ್ರ ಪ್ರದರ್ಶಿಸಲಾಯಿತು.
ನ.18 ರಂದು ಅತ್ಯುತ್ತಮ ಜನಪ್ರೀಯ ಮನರಂಜನಾ ಚಿತ್ರ ಪ್ರಶಸ್ತಿಗೆ ಭಾಜನವಾಗಿರುವ 'ಕಿರಿಕ್ ಪಾರ್ಟಿ', ನ.19ರಂದು ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಪ್ರಶಸ್ತಿ ಪಡೆದ ಚಿತ್ರ 'ರಾಮ ರಾಮ ರೇ', ನ.20ರಂದು ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ ಮತ್ತು ಅತ್ಯುತ್ತಮ ತುಳುಭಾಷಾ ರಾಷ್ಟ್ರ ಪ್ರಶಸ್ತಿ ಪಡೆದ ಮದಿಪು (ತುಳು ಭಾಷೆ) ಚಲನಚಿತ್ರ ಪ್ರದರ್ಶನಗೊಳ್ಳಲಿವೆ.

2016ನೇ ಸಾಲಿನ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ 'ಯೂ ಟರ್ನ್' ಚಿತ್ರ ನ.21 ರಂದು, ಪನೋರಮಾ ವಿಭಾಗದಲ್ಲಿ ಪ್ರದರ್ಶನಗೊಂಡ 'ಅಲ್ಲಮ' ಚಲನಚಿತ್ರ ನ.22ರಂದು, ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯಲ್ಲಿ ದ್ವಿತೀಯ ಅತ್ಯುತ್ತಮ ಚಿತ್ರವೆಂದು ಪ್ರಶಸ್ತಿ ಪಡೆದ ಮಾರಿಕೊಂಡವರು ನ.23 ರಂದು ಪ್ರದರ್ಶನಗೊಳ್ಳಲಿವೆ.
ಈ ಚಲನಚಿತ್ರಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು ಆಗಮಿಸಿ ಈ ಚಲನಚಿತ್ರಗಳನ್ನು ವೀಕ್ಷಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ ಬಿ.ಕೆ ಮನವಿ ಮಾಡಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications